"ಮಹಾ" ರಾಜಕೀಯ ಬೆಳವಣಿಗೆ: ಅಜಿತ್ ಪವಾರ್ ಗೆ ಬಿಜೆಪಿ ಬೆಂಬಲದ ಬಗ್ಗೆ ಶಿಂಧೆ ಬಣ ಏನೆನ್ನುತ್ತಿದೆ ಗೊತ್ತೇ?

 ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ಉರುಳಿಸಿ, ಹೊಸ ಮುಖ್ಯಮಂತ್ರಿಯನ್ನಾಗಿ ಎನ್ ಸಿಪಿಯ ಅಜಿತ್ ಪವಾರ್ ಅವರನ್ನು ಆಯ್ಕೆ ಮಾಡುವ ಲಕ್ಷಣಗಳು ಗೋಚರಿಸುತ್ತಿರುವುದರ ನಡುವೆ ಶಿವಸೇನೆ ಬಣ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. 
ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್
ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್
Updated on

ಮುಂಬೈ: ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ಉರುಳಿಸಿ, ಹೊಸ ಮುಖ್ಯಮಂತ್ರಿಯನ್ನಾಗಿ ಎನ್ ಸಿಪಿಯ ಅಜಿತ್ ಪವಾರ್ ಅವರನ್ನು ಆಯ್ಕೆ ಮಾಡುವ ಲಕ್ಷಣಗಳು ಗೋಚರಿಸುತ್ತಿರುವುದರ ನಡುವೆ ಶಿವಸೇನೆ ಬಣ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. 

ಶಿವಸೇನೆಯ ಮುಖ್ಯ ಸಚೇತಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪವಾರ್ ಗೆ ಬಿಜೆಪಿ ಬೆಂಬಲ ನೀಡುವುದು ಬಿಜೆಪಿ-ಶಿವಸೇನೆಯ ಮೈತ್ರಿಗೆ ವಿರುದ್ಧವಾದದ್ದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಜಿತ್ ಪವಾರ್ ಬಿಜೆಪಿಯೊಂದಿಗೆ ಹೋಗುವ ಊಹಾಪೋಹಗಳ ಬಗ್ಗೆ ಶರದ್ ಪವಾರ್ ಪ್ರತಿಕ್ರಿಯೆ: ಕಠಿಣ ಸಂದೇಶ ರವಾನೆ
 
"ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ, 2024 ರ ಚುನಾವಣೆಯವರೆಗೂ ಶಿಂಧೆ ಅವರೇ ಸಿಎಂ ಆಗಿರುತ್ತಾರೆ ಎಂದು ನಿರ್ಧರಿಸಲಾಗಿತ್ತು.  ಈಗ ಯಾವುದೇ ಪರಿಸ್ಥಿತಿಯಲ್ಲೂ ಅಜಿತ್ ಪವಾರ್ ಸಿಎಂ ಆಗುವುದಕ್ಕೆ ನಾವು ಬಿಡುವುದಿಲ್ಲ. ಮೈತ್ರಿ ವೇಳೆ ನೀಡಿದ್ದ ಮಾತನ್ನು ಉಳಿಸಿಕೊಳ್ಳಬೇಕು ಎಂದು ಶಿವಸೇನೆ ನಾಯಕ ಭರತ್ ಗೊಗವಾಲೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com