social_icon

ಪೂಂಚ್ ದಾಳಿ: ಸೇನಾ ವಾಹನದ ಮೇಲೆ 50 ಬುಲೆಟ್ ಗುರುತು ಪತ್ತೆ

ಪೂಂಚ್ ನಲ್ಲಿ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ 14 ಮಂದಿ ಕಾರ್ಯಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ. 

Published: 25th April 2023 03:58 PM  |   Last Updated: 25th April 2023 04:05 PM   |  A+A-


The mortal remains of the five soldiers are placed for officers and men to pay their last respects in Rajouri

ಪೂಂಚ್ ನಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ

Posted By : Srinivas Rao BV
Source : PTI

ಶ್ರೀನಗರ: ಪೂಂಚ್ ನಲ್ಲಿ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ 14 ಮಂದಿ ಕಾರ್ಯಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ. ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರ ಹೆಡೆಮುರಿಕಟ್ಟಲು ಭಟ ಧುರಿಯನ್-ತೋಟ ಗಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಬೃಹತ್ ಶೋಧಕರ್ಯಾಚರಣೆ ನಡೆದಿದೆ.

ವಿಶೇಷ ಪಡೆಗಳು ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಕೂಡ ದಟ್ಟ ಅರಣ್ಯ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ, ಡ್ರೋನ್‌ಗಳು, ಸ್ನಿಫರ್ ಡಾಗ್‌ಗಳು ಮತ್ತು ಮೆಟಲ್ ಡಿಟೆಕ್ಟರ್‌ಗಳನ್ನು ಈ ಕಾರ್ಯಾಚರಣೆಯಲ್ಲಿ ಬಳಸಲಾಗುತ್ತಿದೆ.

ದಾಳಿಗೆ ಸಂಬಂಧಿಸಿದಂತೆ 14 (ಓವರ್ ಗ್ರೌಂಡ್ ವರ್ಕರ್ ಗಳು) ಸೇರಿದಂತೆ ಸುಮಾರು 50 ಜನರನ್ನು ಬಂಧಿಸಲಾಗಿದೆ ಮತ್ತು ಅವರಲ್ಲಿ ಕೆಲವರನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ​ಪೂಂಚ್ ನಲ್ಲಿ ಭಯೋತ್ಪಾದಕ ದಾಳಿ: ವಿಚಾರಣೆಗಾಗಿ 40 ಮಂದಿ ವಶಕ್ಕೆ

7-8 ಭಯೋತ್ಪಾದಕರ ಎರಡು ಗುಂಪು ಈ ದಾಳಿಯನ್ನು ರೂಪಿಸಿದೆ ಎಂದು ನಂಬಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯ ಪ್ರಕಾರ, ಭಯೋತ್ಪಾದಕರು ವಾಹನದ ಮೇಲೆ ದಾಳಿ ಮಾಡುವ ಮೊದಲು ಈ ರಸ್ತೆಯ ಕಲ್ವರ್ಟ್‌ನಲ್ಲಿ ಅಡಗಿಕೊಂಡಿದ್ದರು ಎಂದು ವರದಿಯಾಗಿದೆ. ದಾಳಿಗೆ ಗುರಿಯಾದ ವಾಹನದಲ್ಲಿ 50 ಕ್ಕೂ ಹೆಚ್ಚು ಗುಂಡಿನ ಗುರುತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಈ ಪ್ರದೇಶದಲ್ಲಿ ಕೆಲವು ನೈಸರ್ಗಿಕ ಗುಹೆಗಳಲ್ಲಿ ಅಡಗುತಾಣಗಳನ್ನು ಸೇನಾ ಪಡೆಗಳು ಪತ್ತೆ ಮಾಡಿವೆ, ಇದನ್ನು ಈ ಹಿಂದೆ ಭಯೋತ್ಪಾದಕರು ಬಳಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp