social_icon

ಒಬ್ಬ ನಾಯಕ ಪ್ರಬಲ ಸಂವಹನದೊಂದಿಗೆ ಹೇಗೆ ದೇಶವನ್ನು ಮುನ್ನಡೆಸುತ್ತಾರೆ ಎಂಬುದಕ್ಕೆ 'ಮನ್​ ಕೀ ಬಾತ್ ಸಾಕ್ಷಿ': ಅಮೀರ್ ಖಾನ್

‘ದೇಶದ ನಾಯಕ ಸಾಮಾನ್ಯ ಜನರೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸುವುದು, ತಮ್ಮ ವಿಚಾರಗಳನ್ನು ಅವರ ಎದುರು ಇಡುವುದು, ಸಲಹೆಗಳನ್ನು ಕೊಡುವುದೆಲ್ಲ ಸಂವಹನ ಕ್ರಿಯೆಯ ಅತ್ಯಂತ ಪ್ರಮುಖ ಭಾಗ’ ಎಂದು ಹೇಳಿದರು.

Published: 26th April 2023 02:09 PM  |   Last Updated: 26th April 2023 04:32 PM   |  A+A-


Actor Aamir Khan, Jamia University VC Najma Akhtar, Karishma Mehta and others during the National Conclave on Mann Ki Baat @100 in New Delhi on Wednesday.  Express photo by Shekhar yadav

ನಟ ಅಮೀರ್ ಖಾನ್, ಜಾಮಿಯಾ ವಿಶ್ವವಿದ್ಯಾನಿಲಯದ ವಿಸಿ ನಜ್ಮಾ ಅಖ್ತರ್, ಕರಿಷ್ಮಾ ಮೆಹ್ತಾ ಮತ್ತು ಇತರರು ಬುಧವಾರ ನವದೆಹಲಿಯಲ್ಲಿ ಮನ್ ಕಿ ಬಾತ್ @100 ರ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದರು. Express photo by Shekhar yadav

Posted By : Shilpa D
Source : PTI

ನವದೆಹಲಿ: 'ಮನ್ ಕಿ ಬಾತ್' ಒಂದು ಮಾಸಿಕ ಕಾರ್ಯಕ್ರಮ. ವರ್ಷದ ಪ್ರತೀ ತಿಂಗಳ ಕೊನೆ ಭಾನುವಾರದಂದು ಆಲ್ ಇಂಡಿಯಾ ರೇಡಿಯೊದಲ್ಲಿ ಪ್ರಸಾರವಾಗುತ್ತದೆ. ಈ  'ಮನ್ ಕಿ ಬಾತ್' ಮೂಲಕ ದೇಶದ ಪ್ರಧಾನಿ ನರೇದ್ರ ಮೋದಿ ಅವರು ಪ್ರಜೆಗಳೊಂದಿಗೆ ಮಾತುಕತೆ ನಡೆಸುತ್ತಾರೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳ ಕೊನೇ ಭಾನುವಾರ ನಡೆಸಿಕೊಡುವ ಜನಪ್ರಿಯ ರೇಡಿಯೊ ಕಾರ್ಯಕ್ರಮ ಮನ್​ ಕೀ ಬಾತ್​ ಶತಕ ಪೂರೈಸಲು ಇನ್ನು ಕೆಲವೇ ದಿನಗಳು ಬಾಕಿ ಇದೆ. ಏಪ್ರಿಲ್​ 30ರಂದು ಪ್ರಧಾನಿ ನರೇಂದ್ರ ಮೋದಿಯವರು ಮನ್​ ಕೀ ಬಾತ್​​ನ 100ನೇ ಸಂಚಿಕೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದೀಗ ಮನ್​ ಕೀ ಬಾತ್​ ಶತಕದ ಆವೃತ್ತಿ ತಲುಪುತ್ತಿರುವ ಹಿನ್ನೆಲೆಯಲ್ಲಿ, ಅದನ್ನು ಸಂಭ್ರಮಿಸುವ ಸಲುವಾಗಿ ಬಿಜೆಪಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದೆ.

ಈ ಕಾರ್ಯಕ್ರಮ ದೊಡ್ಡ ಸಂಖ್ಯೆಯ ಕೇಳುಗರನ್ನು ಹೊಂದಿದ್ದು, ಇದೀಗ ಬಾಲಿವುಡ್​ ಹಿರಿಯ, ಬಹುಬೇಡಿಕೆ ನಟ ಅಮೀರ್​ ಖಾನ್​ ಮಾತನಾಡಿದ್ದಾರೆ. ಮನ್​ ಕೀ ಬಾತ್ ಸಮಾವೇಶಕ್ಕೆ ಬಂದ ನಟ ಆಮೀರ್ ಖಾನ್ ಮಾಧ್ಯಮದೊಂದಿಗೆ ಮಾತನಾಡಿ ‘ದೇಶದ ನಾಯಕ ಸಾಮಾನ್ಯ ಜನರೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸುವುದು, ತಮ್ಮ ವಿಚಾರಗಳನ್ನು ಅವರ ಎದುರು ಇಡುವುದು, ಸಲಹೆಗಳನ್ನು ಕೊಡುವುದೆಲ್ಲ ಸಂವಹನ ಕ್ರಿಯೆಯ ಅತ್ಯಂತ ಪ್ರಮುಖ ಭಾಗ’ ಎಂದು ಹೇಳಿದರು.

ಒಬ್ಬ ನಾಯಕ ಪ್ರಬಲ ಸಂವಹನದೊಂದಿಗೆ ಹೇಗೆ ದೇಶವನ್ನು ಮುನ್ನಡೆಸುತ್ತಾರೆ, ಅವರು ನೋಡುವುದನ್ನು ಜನರಿಗೆ ಹೇಗೆ ಹೇಳುತ್ತಾರೆ, ನಾಯಕನಾದವನು ಭವಿಷ್ಯವನ್ನು ಹೇಗೆ ನೋಡುತ್ತಾನೆ, ಜನರಿಂದ ಯಾವ ಸ್ವರೂಪದ ಬೆಂಬಲವನ್ನು ಬಯಸುತ್ತಿದ್ದಾನೆ..ಎಂಬುದನ್ನೆಲ್ಲ ಈ ಮನ್​ ಕೀ ಬಾತ್​ ತೋರಿಸಿದೆ’ ಎಂದೂ ಆಮಿರ್​ ಖಾನ್​ ಹೇಳಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಗೌರವಾನ್ವಿತ ಅತಿಥಿಯಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಒಂದು ದಿನದ ಸಮಾವೇಶವನ್ನು ಉದ್ಘಾಟಿಸಿದರು. ಪ್ರಧಾನ ಮಂತ್ರಿಗಳ ಮಾಸಿಕ ರೇಡಿಯೋ ಕಾರ್ಯಕ್ರಮದ 100 ನೇ ಸಂಚಿಕೆಯನ್ನು ಏಪ್ರಿಲ್ 30 ರಂದು ಪ್ರಸಾರ ಮಾಡಲು ನಿರ್ಧರಿಸಲಾಗಿದೆ.

2014ರಲ್ಲಿ ನರೇಂದ್ರ ಮೋದಿಯವರು ಮೊದಲ ಬಾರಿ ಪ್ರಧಾನಿಯಾದ ನಂತರ, ಅದೇ ವರ್ಷ ಅಕ್ಟೋಬರ್​​ನಲ್ಲಿ ಮನ್​ ಕೀ ಬಾತ್​ ಕಾರ್ಯಕ್ರಮವನ್ನು ಪ್ರಾರಂಭ ಮಾಡಿದರು. ಇದು ರೇಡಿಯೋ ಮೂಲಕ ಮೋದಿಯವರು ದೇಶದ ಜನರೊಂದಿಗೆ ಮಾತನಾಡುವ ಕಾರ್ಯಕ್ರಮ. ಇಲ್ಲಿ ಅವರು ರಾಜಕೀಯ ವಿಷಯಗಳನ್ನು ಹೇಳುವುದೇ ಇಲ್ಲ. ಬದಲಿಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ಅರಿವು ಮೂಡಿಸುತ್ತಾರೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp