social_icon

ಮಣಿಪುರ ಹಿಂಸಾಚಾರ; ವಿಪಕ್ಷಗಳ ಪರವಾಗಿ ರಾಷ್ಟ್ರಪತಿಗಳ ಭೇಟಿಗೆ ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ

ಮಣಿಪುರ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

Published: 01st August 2023 01:10 PM  |   Last Updated: 01st August 2023 07:04 PM   |  A+A-


Mallikarjun Kharge

ಮಲ್ಲಿಕಾರ್ಜುನ ಖರ್ಗೆ

Posted By : Ramyashree GN
Source : PTI

ನವದೆಹಲಿ: ಮಣಿಪುರ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಈ ಸಂಬಂಧ ರಾಷ್ಟ್ರಪತಿಗಳಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಅವರು ಹೇಳಿದರು.

ಮಣಿಪುರದಲ್ಲಿ ನಡೆದ ಹಿಂಸಾಚಾರದ ಕುರಿತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸಮಗ್ರ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸುತ್ತಲೇ ಇವೆ.

ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಮುಂದುವರಿದಿದೆ ಮತ್ತು ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಈಗ ಈ ವಿಚಾರದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆಯನ್ನು ಕೋರಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳ 21 ಸಂಸದರ ನಿಯೋಗವು ಜನಾಂಗೀಯ ಕಲಹ ಪೀಡಿತ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದೆ ಮತ್ತು ಅಲ್ಲಿನ ಪರಿಸ್ಥಿತಿಯ ಬಗ್ಗೆ ನಿಯೋಗವು INDIA ಮೈತ್ರಿಕೂಟದ ಉಳಿದ ನಾಯಕರಿಗೆ ವಿವರಿಸಿದೆ.

ಇದನ್ನೂ ಓದಿ: ಪೊಲೀಸರು ಏನು ಮಾಡುತ್ತಿದ್ದರು?: ಮಣಿಪುರ ವೈರಲ್ ವಿಡಿಯೋ ಕುರಿತು ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ವಿರೋಧ ಪಕ್ಷದ ಸಂಸದರ ನಿಯೋಗವು ಮಣಿಪುರದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿತು ಮತ್ತು ಪರಿಹಾರ ಶಿಬಿರಗಳಲ್ಲಿರುವ ಜನರನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಿತು.

ಮಣಿಪುರಕ್ಕೆ ತೆರಳಿದ ವಿರೋಧ ಪಕ್ಷದ ಸಂಸದರ ನಿಯೋಗದ ಭಾಗವಾಗಿದ್ದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯದ ಪರಿಸ್ಥಿತಿಯನ್ನು 'ಶ್ಮಶಾನ'ದಂತಾಗಿದೆ ಎಂದು ಬಣ್ಣಿಸಿದ್ದಾರೆ.


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp