'ಅಶಿಸ್ತಿನ ವರ್ತನೆ' ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅಮಾನತು!

ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 'ಅಶಿಸ್ತಿನ' ನಡವಳಿಕೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಮಾನತು ನಿರ್ಣಯವನ್ನು ಮಂಡಿಸಿದರು.
ಅಧೀರ್ ರಂಜನ್ ಚೌಧರಿ
ಅಧೀರ್ ರಂಜನ್ ಚೌಧರಿ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 'ಅಶಿಸ್ತಿನ' ನಡವಳಿಕೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಮಾನತು ನಿರ್ಣಯವನ್ನು ಮಂಡಿಸಿದರು. 

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಕಾರ್ಯವೈಖರಿಯನ್ನು ವಿಶೇಷಾಧಿಕಾರಗಳ ಸಮಿತಿಗೆ ಶಿಫಾರಸು ಮಾಡಲು ಲೋಕಸಭೆ ನಿರ್ಧರಿಸಿದೆ. ಸಮಿತಿಯ ತೀರ್ಮಾನದವರೆಗೆ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ಅಧೀರ್ ರಂಜನ್ ಚೌಧರಿ ಅವರು ಸಂಸತ್ತಿನ ಕಲಾಪದಲ್ಲಿ ನಿರಂತರವಾಗಿ ಅಡ್ಡಿಪಡಿಸುತ್ತಿದ್ದಾರೆ. ಅಲ್ಲದೆ ದೇಶದ ಇಮೇಜ್ ಗೆ ಅಪಖ್ಯಾತಿ ತಂದಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಮ್ಮ ನಿರ್ಣಯದಲ್ಲಿ ಆರೋಪಿಸಿದರು. ಸವಲತ್ತುಗಳ ಸಮಿತಿಯು ಈ ವಿಷಯದ ಬಗ್ಗೆ ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ಅಮಾನತುಗೊಳಿಸಲಾಗುತ್ತದೆ.

ಪ್ರಸ್ತಾವನೆಯನ್ನು ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವರು, 'ಇದು ಅಭ್ಯಾಸವಾಗಿ ಹೋಗಿದೆ. ಪದೇ ಪದೇ ಎಚ್ಚರಿಕೆ ನೀಡಿದರೂ ಅವರು ತಮ್ಮನ್ನು ತಾವು ಸುಧಾರಿಸಿಕೊಳ್ಳಲಿಲ್ಲ. ಅವರು ಯಾವಾಗಲೂ ತಮ್ಮ ಚರ್ಚೆಗಳಲ್ಲಿ ಆಧಾರರಹಿತ ಆರೋಪಗಳನ್ನು ಮಾಡುತ್ತಾರೆ. ಅವರು ದೇಶ ಮತ್ತು ಅದರ ಚಿತ್ರಣವನ್ನು ಅವಮಾನಿಸುತ್ತಾರೆ. ಅಲ್ಲದೆ ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದರು.

ಬುಧವಾರ ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡುತ್ತಿದ್ದಾಗಲೂ ಚೌಧರಿ ಇದೇ ರೀತಿ ವರ್ತಿಸಿದ್ದರು ಎಂದು ಸಚಿವರು ಹೇಳಿದ್ದಾರೆ. ಜೋಶಿ ನಂತರ ಅಧೀರ್ ಅವರ ಪ್ರಕರಣವನ್ನು ವಿಶೇಷಾಧಿಕಾರಗಳ ಸಮಿತಿಗೆ ಉಲ್ಲೇಖಿಸುವ ಪ್ರಸ್ತಾಪವನ್ನು ಮಂಡಿಸಿದರು. ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅಧೀರ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. ಪ್ರಸ್ತಾವನೆಯನ್ನು ಸಂಸತ್ತು ಅಂಗೀಕರಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com