social_icon

ವಿಪಕ್ಷಗಳ ಮೈತ್ರಿಕೂಟದ 3ನೇ ಸಭೆ: ಇಂಡಿಯಾ ಮೈತ್ರಿಕೂಟದಿಂದ ದೂರ ಉಳಿದ ಶಿರೋಮಣಿ ಅಕಾಲಿದಳ, ಬಿಎಸ್‌ಪಿ

ಇಂದಿನಿಂದ ವಾಣಿಜ್ಯ ನಗರಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ. ಕಳೆದ ಬಾರಿ ಸಭೆ ಸೇರಿದಾಗ 26 ಪಕ್ಷಗಳು ಭಾಗವಹಿಸಿದ್ದವು. 

Published: 31st August 2023 10:24 AM  |   Last Updated: 31st August 2023 07:11 PM   |  A+A-


Congress Maharashtra President Nana Patole, Shiv Sena (UBT) Chief Uddhav Thackeray and NCP chief Sharad Pawar during the MVA press conference on the eve of I.N.D.I.A. alliance meeting, in Mumbai. (PTI)

ಮುಂಬೈನಲ್ಲಿಇಂಡಿಯಾ ಮೈತ್ರಿಕೂಟದ ಸಭೆಯ ಮುನ್ನಾದಿನ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮಹಾರಾಷ್ಟ್ರ ಅಧ್ಯಕ್ಷ ನಾನಾ ಪಟೋಲೆ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್.

Posted By : Ramyashree GN
Source : Express News Service

ಮುಂಬೈ: ಇಂದಿನಿಂದ ವಾಣಿಜ್ಯ ನಗರಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ. ಕಳೆದ ಬಾರಿ ಸಭೆ ಸೇರಿದಾಗ 26 ಪಕ್ಷಗಳು ಭಾಗವಹಿಸಿದ್ದವು. 

2020ರಲ್ಲಿ ಎನ್‌ಡಿಎ ತೊರೆದ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತು ಬಿಎಸ್‌ಪಿ ಎಂಬ ಎರಡು ಪಕ್ಷಗಳು ಇಂಡಿಯಾ ಮೈತ್ರಿಕೂಟಕ್ಕೆ ಸೇರುತ್ತಿಲ್ಲ. ಈ ನಿರ್ಧಾರದ ಹಿಂದೆ ಅವೆರಡಕ್ಕೂ ತಮ್ಮದೇ ಆದ ಕಾರಣಗಳಿವೆ ಎಂದು ಪವಾರ್ ಉಲ್ಲೇಖಿಸಿದ್ದಾರೆ. 

ಎಸ್‌ಎಡಿಗೆ ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ನೇರ ಪ್ರತಿಸ್ಪರ್ಧಿಗಳಾಗಿವೆ. ಸದ್ಯ ಮೈತ್ರಿಕೂಟದ ಪಾಲುದಾರರಿಗೆ ನೋವುಂಟು ಮಾಡುವ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಯಾವ ಕಡೆ ಇದ್ದಾರೆ ಎಂಬುದು ಗೊತ್ತಾಗಿದೆ. ಅವರು ಈಗಾಗಲೇ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾದಂತೆ ವಿಷಯಗಳು ಹೆಚ್ಚು ಸ್ಪಷ್ಟವಾಗುತ್ತವೆ ಎಂದು ಪವಾರ್ ಹೇಳಿದ್ದಾರೆ. 

ಇದನ್ನೂ ಓದಿ: 'ಇಂಡಿಯಾ' ಮೈತ್ರಿಕೂಟದ 3ನೇ ಸಭೆ; 2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ಸದ್ಯಕ್ಕಿಲ್ಲ!

ತನ್ನ ಮಟ್ಟಿಗೆ, ಕಾಂಗ್ರೆಸ್ ಮತ್ತು ಎಎಪಿಯನ್ನು ಒಳಗೊಂಡಿರುವ ಯಾವುದೇ ಮೈತ್ರಿಯ ಭಾಗವಾಗಿರಲು ಸಾಧ್ಯವಿಲ್ಲ ಎಂದು ಎಸ್‌ಎಡಿ ಹೇಳಿದೆ. ಎಸ್ಎಡಿ ನಾಯಕ ಬಲ್ವಿಂದರ್ ಸಿಂಗ್ ಭುಂದರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ತಮ್ಮ ಪಕ್ಷವನ್ನು ಸಂಪರ್ಕಿಸಲಾಗಿದೆ. ಆದರೆ, ಪಕ್ಷವು ಅದರಿಂದ ದೂರ ಉಳಿಯುತ್ತದೆ ಎಂದು ಖಚಿತಪಡಿಸಿದ್ದಾರೆ. 

ಇದನ್ನೂ ಓದಿ: INDIA ಮೈತ್ರಿಕೂಟ ಸೇರಿದ ಮತ್ತೆ ಎರಡು ಪ್ರಾದೇಶಿಕ ಪಕ್ಷಗಳು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರುವಂತೆ ಎಸ್ಎಡಿ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳವನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಯಾವತಿ ಕೂಡ ಬಿಎಸ್‌ಪಿ ಚುನಾವಣೆಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ತಾವು ಎನ್‌ಡಿಎ ಮತ್ತು ಇಂಡಿಯಾದಿಂದ ಸಮಾನ ಅಂತರ ಕಾಯ್ದುಕೊಳ್ಳುವ ತಮ್ಮ ನಿಲುವನ್ನು ಪುನರುಚ್ಚರಿಸಿದರು.


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp