ಆಂಧ್ರ ಸಿಎಂ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಚಂಡಮಾರುತ ನಿಭಾಯಿಸಲು ಅಗತ್ಯ ನೆರವು ನೀಡುವ ಭರವಸೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಚಾಂಗ್ ಚಂಡಮಾರುತದ ಪ್ರಭಾವವನ್ನು ನಿರ್ವಹಿಸಲು ರಾಜ್ಯವು ಮಾಡಿದ ಸಿದ್ಧತೆಗಳ ಪರಿಶೀಲನೆ ಮತ್ತು ಚಂಡಮಾರುತವನ್ನು ನಿಭಾಯಿಸಲು ಅಗತ್ಯವಿರುವ ಯಾವುದೇ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. 

ಸಾಧ್ಯವಿರುವ ಎಲ್ಲ ಸಹಾಯವನ್ನು ರಾಜ್ಯಕ್ಕೆ ವಿಸ್ತರಿಸುವಂತೆ ನೋಡಿಕೊಳ್ಳುವಂತೆ ಮೋದಿ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಭಾನುವಾರ 'ಮೈಚಾಂಗ್' ಚಂಡಮಾರುತವಾಗಿ ತೀವ್ರಗೊಂಡಿದ್ದು, ಡಿಸೆಂಬರ್ 5ರ ಮುಂಜಾನೆ ದಕ್ಷಿಣ ಆಂಧ್ರಪ್ರದೇಶದ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ 80-90ರಷ್ಟು ವೇಗದ ಗಾಳಿಯು ಗಂಟೆಗೆ 100 ಕಿಮೀ ವೇಗದೊಂದಿಗೆ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಗಂಟೆಗೆ 100 ಕಿಮೀ ವೇಗದಲ್ಲಿ  ಬೀಸುತ್ತಿದೆ ಎಂದು ಹವಾಮಾನ ಇಲಾಖೆಯ ಬುಲೆಟಿನ್‌ನಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com