ಆರ್ಟಿಕಲ್ 370 ರದ್ದತಿ: ನ್ಯಾ. ಕೌಲ್ ಭಿನ್ನ ಆದೇಶದಲ್ಲೇನಿದೆ ಅಂದರೆ....

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ 5 ನ್ಯಾಯಾಧೀಶರ ಪೀಠ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.
ನ್ಯಾ.ಸಂಜಯ್ ಕಿಶನ್ ಕೌಲ್
ನ್ಯಾ.ಸಂಜಯ್ ಕಿಶನ್ ಕೌಲ್
Updated on

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ 5 ನ್ಯಾಯಾಧೀಶರ ಪೀಠ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

5 ಸದಸ್ಯರ ಪೀಠದಲ್ಲಿ ಒಬ್ಬರಾಗಿದ್ದ ನ್ಯಾ. ಕೌಲ್ ಉಳಿದ ನ್ಯಾಯಾಧೀಶರಿಗಿಂತ ಸ್ವಲ್ಪ ಭಿನ್ನವಾದ ಅಭಿಪ್ರಾಯವನ್ನು ಪ್ರಕಟಿಸಿದ್ದಾರೆ. 1980 ರಿಂದ ಜಮ್ಮು-ಕಾಶ್ಮೀರದಲ್ಲಿ ನಡೆದ ಮಾನವ ಹಕ್ಕುಗಳ ಮೇಲಿನ ದೌರ್ಜನ್ಯಗಳ ಮೇಲೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ನ್ಯಾ.ಸಂಜಯ್ ಕಿಶನ್ ಕೌಲ್ ತಮ್ಮ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

"1980 ರ ದಶಕದಿಂದಲೂ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ಅಥವಾ ಅಥವಾ ಸರ್ಕಾರದಲ್ಲಿರುವವರ ಹೊರತಾಗಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ನಿಷ್ಪಕ್ಷಪಾತ ಸತ್ಯ ಮತ್ತು ಸಮನ್ವಯ ಸಮಿತಿಯನ್ನು ಸ್ಥಾಪಿಸಲು ನಾನು ಶಿಫಾರಸು ಮಾಡುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

"ಭವಿಷ್ಯದೆಡೆಗೆ ಸಾಗಲು, ಈ ಹಿಂದೆ ಉಂಟಾಗಿರುವ ನೋವುಗಳನ್ನು, ಗಾಯಗಳನ್ನು ವಾಸಿಮಾಡುವ ಅಗತ್ಯವಿದೆ. ಪೀಳಿಗೆಗಳು ಕಳೆದರೂ ಜನರು ಆಘಾತವನ್ನು ಅನುಭವಿಸುತ್ತಾರೆ. ಆದ್ದರಿಂದ ಆಗಿರುವ ನೋವುಗಳನ್ನು ಗುಣಪಡಿಸುವ ಮೊದಲ ಹೆಜ್ಜೆಯಾಗಿ ಜಮ್ಮು-ಕಾಶ್ಮೀರದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಯ ಕೃತ್ಯಗಳು ನಡೆದಿರುವುದನ್ನು ಒಪ್ಪಿಕೊಳ್ಳಬೇಕಾಗುತ್ತದೆ" ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರವನ್ನು ಕ್ರಮೇಣ ಭಾರತಕ್ಕೆ ಸಂಯೋಜಿಸುವುದು 370 ರ ಮೂಲ ಗುರಿಯಾಗಿತ್ತು ಎಂದು ನ್ಯಾ. ಕೌಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com