ಬಿಹಾರ: ದೇವಾಲಯದ ಸಿಬ್ಬಂದಿ ಶವ ಪತ್ತೆಯಾದ ನಂತರ ಉದ್ವಿಗ್ನತೆ

ವಾರದ ಹಿಂದೆ ನಾಪತ್ತೆಯಾಗಿದ್ದ ದೇವಾಲಯವೊಂದರ ಸಿಬ್ಬಂದಿಯ ಶವ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಗ್ರಾಮವೊಂದರ ಹೊರವಲಯದಲ್ಲಿ ವಿಕೃತ ಸ್ಥಿತಿಯಲ್ಲಿ ಪತ್ತೆಯಾದ ನಂತರ ಭಾನುವಾರ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗೋಪಾಲ್ ಗಂಜ್: ವಾರದ ಹಿಂದೆ ನಾಪತ್ತೆಯಾಗಿದ್ದ ದೇವಾಲಯವೊಂದರ ಸಿಬ್ಬಂದಿಯ ಶವ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಗ್ರಾಮವೊಂದರ ಹೊರವಲಯದಲ್ಲಿ ವಿಕೃತ ಸ್ಥಿತಿಯಲ್ಲಿ ಪತ್ತೆಯಾದ ನಂತರ ಭಾನುವಾರ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಮನೋಜ್ ಕುಮಾರ್ ಸಾಹ್ ಎಂದು ಗುರುತಿಸಲಾಗಿದೆ. ಸೋಮವಾರದಂದು ದಾನಪುರ ಪ್ರದೇಶದ ಮಂಜಾ ಗ್ರಾಮದ ದೇವಸ್ಥಾನದಿಂದ ಹೊರಗೆ ಹೋಗುವಾಗ ಕೊನೆಯದಾಗಿ ಕಾಣಿಸಿಕೊಂಡಿದ್ದ ಈತನ ಶವ ಶನಿವಾರ ಪತ್ತೆಯಾಗಿದೆ ಎಂದು ಗೋಪಾಲಗಂಜ್ ಪೊಲೀಸ್ ವರಿಷ್ಠಾಧಿಕಾರಿ ಸ್ವರ್ಣ್ ಪ್ರಭಾತ್ ತಿಳಿಸಿದ್ದಾರೆ.

ಈತ ದೇವಸ್ಥಾನದ ಅರ್ಚಕ ಎಂಬ ವದಂತಿ ಹರಡುತ್ತಿದೆ. ಈತ ದೇವಸ್ಥಾನದ ಆವರಣದೊಳಗೆ ಮಲಗುತ್ತಿದ್ದ. ಸೋಮವಾರ ರಾತ್ರಿ ದೇವಸ್ಥಾನದ ಗೇಟ್‌ಗೆ ಬೀಗ ಹಾಕಿ ಹೊರಗೆ ಹೋಗುತ್ತಿರುವುದನ್ನು ಕೊನೆಯದಾಗಿ ನೋಡಿದ್ದಾಗಿ ಸ್ಥಳೀಯರು ಹೇಳುತ್ತಾರೆ. ಹೆಚ್ಚಿನ ವಿವರ ತನಿಖೆಯ ನಂತರ ಗೊತ್ತಾಗಿದೆ ಎಂದು ಪ್ರಭಾತ್ ಹೇಳಿದ್ದಾರೆ.

ದೇಹದ ಮೇಲೆ ಗುಂಡಿನ ಗಾಯಗಳು, ಕಣ್ಣುಗಳು ಮಾಯ,  ಖಾಸಗಿ ಭಾಗಗಳ ಮೇಲೆ ಗಾಯಗಳ ವರದಿ ಕುರಿತು ಉತ್ತರಿಸಿದ ಎಸ್ಪಿ, ಮರಣೋತ್ತರ ಪರೀಕ್ಷೆಯ ವರದಿ ನಂತರ ಎಲ್ಲಾವೂ ತಿಳಿದುಬರಲಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com