ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ದೆಹಲಿ ಅಬಕಾರಿ ನೀತಿ ಪಿಎಂಎಲ್‌ಎ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಸಂಜಯ್ ಸಿಂಗ್
ಸಂಜಯ್ ಸಿಂಗ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಪಿಎಂಎಲ್‌ಎ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜನವರಿ 10 ರವರೆಗೆ ವಿಸ್ತರಿಸಿತ್ತು. ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ತೀರ್ಪು ನೀಡಿದ್ದರು. 

ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರಿಗೆ ಅದರ ಐದನೇ ಪೂರಕ ಚಾರ್ಜ್ ಶೀಟ್ ಮತ್ತು ಇತರ ಸಂಬಂಧಿತ ದಾಖಲೆಗಳ ಪ್ರತಿಯನ್ನು ನೀಡುವಂತೆ ನ್ಯಾಯಾಧೀಶರು ಜಾರಿ ನಿರ್ದೇಶನಾಲಯವನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com