ಲೋಕಸಭಾ ಚುನಾವಣೆ 2024: ಮಹಾರಾಷ್ಟ್ರ ಸೀಟು ಹಂಚಿಕೆ ಕುರಿತು ರಾಹುಲ್, ಪವಾರ್ ಮಾತುಕತೆ

2024ರ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಚಿಸಲು 16 ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಪಕ್ಷದ ಸದಸ್ಯ ಪಿ ಚಿದಂಬರಂ ನೇತೃತ್ವದಲ್ಲಿದೆ
ರಾಹುಲ್ ಗಾಂಧಿ, ಶರದ್ ಪವಾರ್
ರಾಹುಲ್ ಗಾಂಧಿ, ಶರದ್ ಪವಾರ್
Updated on

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಚಿಸಲು 16 ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಪಕ್ಷದ ಸದಸ್ಯ ಪಿ ಚಿದಂಬರಂ ನೇತೃತ್ವದಲ್ಲಿದೆ. ನಿನ್ನೆ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶರದ್ ಪವಾರ್ ಅವರೊಂದಿಗೆ ಕಾರ್ಯತಂತ್ರದ ಸಭೆ ನಡೆಸಿದ್ದು, ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. 

ಜಂತರ್ ಮಂತರ್ ನಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯ ನಂತರ ರಾಹುಲ್ ಗಾಂಧಿ ಜನಪಥ್‌ನಲ್ಲಿರುವ ಪವಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.  ಶಿವಸೇನೆ (ಉಧವ್ ಬಾಳಾಸಾಹೇಬ್ ಠಾಕ್ರೆ), ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸೇರಿದಂತೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಪಾಲುದಾರರ ನಡುವಿನ ಸೀಟು ಹಂಚಿಕೆಯ ಸುತ್ತ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ. 

ಅನುಭವಿ ಎನ್‌ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದಲ್ಲಿ ಸ್ಥಳೀಯ ಪ್ರಭಾವದಿಂದಾಗಿ ಎಡಪಕ್ಷಗಳು, ರೈತರು ಮತ್ತು ಕಾರ್ಮಿಕರ ಪಕ್ಷ ಮತ್ತು  ಬಹುಜನ ಅಘಾಡಿಯಂತಹ ಸಣ್ಣ ಪಕ್ಷಗಳನ್ನು ವಿಪಕ್ಷಗಳ ಒಕ್ಕೂಟದಲ್ಲಿ ಸೇರಿಸಿಕೊಳ್ಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಜಂಟಿ ರ್ಯಾಲಿಗಳನ್ನು ಸುಲಭಗೊಳಿಸುವ ಗುರಿ ಹೊಂದಿರುವ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಒಪ್ಪಂದಗಳನ್ನು ಶೀಘ್ರವಾಗಿ ಅಂತಿಮಗೊಳಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com