ದೇಶ ವಿರೋಧಿ ಚಟುವಟಿಕೆ: 'ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ' ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ!

ದೇಶವಿರೋಧಿ ಚಟುವಟಿಕೆಗಳಿಂದಾಗಿ ಯುಎಪಿಎ ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ (ಮಸರತ್ ಆಲಂ ಗ್ರೂಪ್) ಸಂಘಟನೆಯನ್ನು ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು ಐದು ವರ್ಷಗಳ ಕಾಲ ನಿಷೇಧ ಇರಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ
Updated on

ನವದೆಹಲಿ: ದೇಶವಿರೋಧಿ ಚಟುವಟಿಕೆಗಳಿಂದಾಗಿ ಯುಎಪಿಎ ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ (ಮಸರತ್ ಆಲಂ ಗ್ರೂಪ್) ಸಂಘಟನೆಯನ್ನು ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು ಐದು ವರ್ಷಗಳ ಕಾಲ ನಿಷೇಧ ಇರಲಿದೆ.

ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ)/ಎಂಎಲ್‌ಜೆಕೆ-ಎಂಎಯನ್ನು ಯುಎಪಿಎ ಅಡಿಯಲ್ಲಿ ಅಕ್ರಮ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಅಮಿತ್ ಶಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಾರೆ. ನಮ್ಮ ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಯಾವುದೇ ಬೆಲೆಗೆ ಉಳಿಸಲಾಗುವುದಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂದೇಶವಾಗಿದೆ.

ಮುಸ್ಲಿಂ ಲೀಗ್ ಮಸರತ್ ಆಲಂ ಗ್ರೂಪ್ ಮಸರತ್ ಆಲಂ ಭಟ್ ನೇತೃತ್ವದಲ್ಲಿದೆ. ಈ ಸಂಘಟನೆಯು ದೇಶವಿರೋಧಿ ಮತ್ತು ಪಾಕಿಸ್ತಾನದ ಪರ ಪ್ರಚಾರಕ್ಕೆ ಹೆಸರುವಾಸಿಯಾಗಿದೆ. ಈ ಸಂಘಟನೆಯು ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಮುಕ್ತಗೊಳಿಸಲು ಬಯಸುತ್ತದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರವು ಪಾಕಿಸ್ತಾನದೊಂದಿಗೆ ವಿಲೀನಗೊಳ್ಳಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಬಹುದು.

ಈ ಸಂಘಟನೆಯ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ನಿರಂತರ ಕಲ್ಲು ತೂರಾಟ ಸೇರಿದಂತೆ ಭಯೋತ್ಪಾದಕರನ್ನು ಬೆಂಬಲಿಸುವುದು ಮತ್ತು ಇತರ ಚಟುವಟಿಕೆಗಳಲ್ಲಿ ಅದರ ನಾಯಕರು ಮತ್ತು ಸದಸ್ಯರು ತೊಡಗಿಸಿಕೊಂಡಿದ್ದಾರೆ. ಈ ಸಂಸ್ಥೆಯು ಪಾಕಿಸ್ತಾನ ಮತ್ತು ಅದರ ಪ್ರಾಕ್ಸಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ ಹಣವನ್ನು ಸಂಗ್ರಹಿಸುತ್ತದೆ. ಇದಲ್ಲದೆ, ತನ್ನ ಚಟುವಟಿಕೆಗಳಿಂದ ಅವರು ದೇಶದ ಸಾಂವಿಧಾನಿಕ ಅಧಿಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯನ್ನು ಅಗೌರವಿಸುತ್ತಾರೆ.

ನಿಷೇಧದ ಅರ್ಥವೇನು?
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಕೇಂದ್ರ ಸರ್ಕಾರವು ಯಾವುದೇ ಸಂಘಟನೆಯನ್ನು 'ಕಾನೂನುಬಾಹಿರ' ಅಥವಾ 'ಭಯೋತ್ಪಾದಕ' ಎಂದು ಘೋಷಿಸಬಹುದು. ಇದನ್ನೇ ಸಾಮಾನ್ಯ ಭಾಷೆಯಲ್ಲಿ 'ನಿರ್ಬಂಧ' ಎನ್ನುತ್ತಾರೆ.

ಸಂಘಟನೆಯನ್ನು 'ಕಾನೂನುಬಾಹಿರ' ಅಥವಾ 'ಭಯೋತ್ಪಾದಕ' ಅಥವಾ 'ನಿಷೇಧಿಸಲಾಗಿದೆ' ಎಂದು ಘೋಷಿಸಿದರೆ, ಅದರ ಸದಸ್ಯರನ್ನು ಅಪರಾಧಿಗಳೆಂದು ಪರಿಗಣಿಸಬಹುದು ಮತ್ತು ಅದರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು.

ಗೃಹ ಸಚಿವಾಲಯದ ಪ್ರಕಾರ, ಪ್ರಸ್ತುತ ದೇಶದಲ್ಲಿ 42 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಲಾಗಿದೆ. ಅಂದರೆ, ಅವುಗಳನ್ನು ನಿಷೇಧಿಸಲಾಗಿದೆ. ಇವುಗಳಲ್ಲಿ ಅನೇಕ ಖಲಿಸ್ತಾನಿ ಸಂಘಟನೆಗಳು, ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್, ಎಲ್‌ಟಿಟಿಇ ಮತ್ತು ಅಲ್ ಖೈದಾ ಮುಂತಾದ 42 ಸಂಘಟನೆಗಳು ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com