ಹಸುಗಳಿಗೆ ಹುಲ್ಲು ತಿನ್ನಿಸಿ, ಮದ್ಯಪಾನ ಬದಲು ಹಾಲು ಕುಡಿಯಿರಿ: ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಉಮಾ ಭಾರತಿ ಪ್ರತಿಭಟನೆ

ಮಧ್ಯಪ್ರದೇಶದಲ್ಲಿ ಮದ್ಯಪಾನ ವಿರುದ್ಧ ಹೋರಾಟ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ.
ಉಮಾ ಭಾರತಿ
ಉಮಾ ಭಾರತಿ
Updated on

ಒರ್ಚಾ: ಮಧ್ಯಪ್ರದೇಶದಲ್ಲಿ ಮದ್ಯಪಾನ ವಿರುದ್ಧ ಹೋರಾಟ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ.

ದನಗಳಿಗೆ ಹುಲ್ಲು ತಿನ್ನಿಸಿ, ಮದ್ಯಪಾನ ಬದಲು ಹಾಲು ಕುಡಿಯಿರಿ ಎಂದು ಹೇಳಿದ್ದಾರೆ. ನಿವಾರಿ ಜಿಲ್ಲೆಯಲ್ಲಿರುವ  ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್‌ (ಐಎಂಎಫ್‌ಎಲ್‌) ಮಳಿಗೆ ಮುಂದೆ ಬೀಡಾಡಿ ದನಗಳನ್ನು ಕಟ್ಟಿ, ಹಾಲು ಕುಡಿಯಿರಿ, ಶರಾಬನ್ನಲ್ಲ ಎಂದು ಘೋಷಣೆ ಕೂಗಿದ್ದಾರೆ. ತಕ್ಷಣವೇ ಮಳಿಗೆಯ ಮಾರಾಟ ಸಿಬ್ಬಂದಿ ಬಾಗಿಲು ಬಂದ್ ಮಾಡಿದ್ದಾರೆ.

ಮದ್ಯಪಾನ ಮಾಡುವ ಅಭ್ಯಾಸವನ್ನು ಸರ್ಕಾರ ಪ್ರೋತ್ಸಾಹಿಸಬಾರದು ಎಂದು ಹೇಳಿರುವ ಅವರು, ಮದ್ಯಪಾನದಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ನಾವು ತಡೆಗಟ್ಟುತ್ತೇವೆ ಎಂದು ನಾವು 2003ರ ಚುನಾವಣೆಯಲ್ಲಿ ಮತ ಕೇಳಿದ್ದೆವು. ಈಗಿನ ಸಮಸ್ಯೆಗೆ ನಾನೂ ಕೂಡ ಕಾರಣ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com