ಛತ್ತೀಸ್‌ಗಢ: ಆಟೋಗೆ ಟ್ರಕ್ ಡಿಕ್ಕಿ, ಏಳು ಶಾಲಾ ಮಕ್ಕಳು ಸಾವು

ರಾಯ್‌ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ಗುರುವಾರ ಮಧ್ಯಾಹ್ನ ಆಟೋಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ.
ಆಟೋಗೆ ಟ್ರಕ್ ಡಿಕ್ಕಿ
ಆಟೋಗೆ ಟ್ರಕ್ ಡಿಕ್ಕಿ
Updated on

ರಾಯ್‌ಪುರ: ರಾಯ್‌ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ಗುರುವಾರ ಮಧ್ಯಾಹ್ನ ಆಟೋಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.

ಕೋರೇರ್-ಭಾನುಪ್ರತಾಪುರ ಮಾರ್ಗದಲ್ಲಿ ಶಾಲಾ ಮಕ್ಕಳು ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

“ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆಟೋ-ರಿಕ್ಷಾ ಬಹುಶಃ ತಪ್ಪು ದಿಕ್ಕಿನಲ್ಲಿ ಹಠಾತ್ ತಿರುವು ತೆಗೆದುಕೊಂಡಿದೆ. ಈ ವೇಳೆ  ಎದುರಿನಿಂದ ಬಂದ ಟ್ರಕ್ ಅದಕ್ಕೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿ ಒಟ್ಟು ಎಂಟು ಮಕ್ಕಳಿದ್ದರು. ಉಳಿದ ಗಾಯಗೊಂಡ ಮಗುವನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಕಳುಹಿಸಲಾಗುವುದು" ಎಂದು ಕಂಕೇರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಲಭ್ ಸಿನ್ಹಾ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಪಘಾತದ ನಂತರ ಲಾರಿ ಚಾಲಕ ತಲೆಮರೆಸಿಕೊಂಡಿದ್ದಾನೆ.

ಶಾಲಾ ಮಕ್ಕಳ ಸಾವಿಗೆ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂತಾಪ ಸೂಚಿಸಿದ್ದು, ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com