ರಾಜ್ಯಸಭೆ ಕಲಾಪ ವಿಡಿಯೋ ಮಾಡಿದ ಕಾಂಗ್ರೆಸ್ ಸಂಸದೆ ಬಜೆಟ್ ಅಧಿವೇಶನದಿಂದ ಅಮಾನತು

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ.
ರಜನಿ ಅಶೋಕರಾವ್ ಪಾಟೀಲ್
ರಜನಿ ಅಶೋಕರಾವ್ ಪಾಟೀಲ್
Updated on

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ನಡೆದ ಗದ್ದಲವನ್ನು ಚಿತ್ರೀಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಧಂಖರ್ ಅವರು, ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ರಾಜಕೀಯ ಪಕ್ಷಗಳ ನಾಯಕರಿಗೆ ಕೇಳಿದ್ದರು.

ನಂತರ, ಬಜೆಟ್ ಅಧಿವೇಶದಿಂದ ಪಾಟೀಲ್ ಅವರನ್ನು ಅಮಾನತುಗೊಳಿಸುವ ನಿರ್ಣಯ ಅಂಗೀಕರಿಸಲಾಗಿತ್ತು. ಆದರೆ ಈ ವಿಷಯದ ಕುರಿತು ಸಂಸದೀಯ ಹಕ್ಕು ಬಾಧ್ಯತೆ ಸಮಿತಿಯ ವರದಿ ಬಾಕಿ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com