social_icon

ಅಸ್ಸಾಂ ರಾಜ್ಯಪಾಲರಾಗಿ ಕಟಾರಿಯಾ: ವಸುಂದರಾ ರಾಜೇ ಮೈನ್ ಸ್ಟ್ರೀಮ್ ರಾಜಕೀಯ? ರಾಜಸ್ತಾನ ವಿಪಕ್ಷ ನಾಯಕರಾಗ್ತಾರಾ ಮಾಜಿ ಸಿಎಂ!

ಗುಲಾಬ್ ಚಂದ್ ಕಟಾರಿಯಾ ಅವರು ಅಸ್ಸಾಂ ರಾಜ್ಯಪಾಲರಾಗಿ ಭಾನುವಾರ ನೇಮಕಗೊಂಡಿದ್ದಾರೆ. ಎಂಟು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿರುವ ಕಟಾರಿಯಾ ಅವರು ಈ ಹಿಂದೆ ರಾಜಸ್ಥಾನ ಬಿಜೆಪಿ ಅಧ್ಯಕ್ಷರೂ ಆಗಿದ್ದರು.

Published: 13th February 2023 09:46 AM  |   Last Updated: 13th February 2023 06:26 PM   |  A+A-


Vasundhara Raje

ವಸುಂದರಾ ರಾಜೇ

Posted By : Shilpa D
Source : The New Indian Express

ಜೈಪುರ: ಗುಲಾಬ್ ಚಂದ್ ಕಟಾರಿಯಾ ಅವರು ಅಸ್ಸಾಂ ರಾಜ್ಯಪಾಲರಾಗಿ ಭಾನುವಾರ ನೇಮಕಗೊಂಡಿದ್ದಾರೆ. ಎಂಟು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿರುವ ಕಟಾರಿಯಾ ಅವರು ಈ ಹಿಂದೆ ರಾಜಸ್ಥಾನ ಬಿಜೆಪಿ ಅಧ್ಯಕ್ಷರೂ ಆಗಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಯೋಗಕ್ಷೇಮ ವಿಚಾರಿಸಲು ಕರೆ ಮಾಡಿದ್ದರು, ಆದರೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಆದಾಗ್ಯೂ, ಕರೆ ಮೂಲಕ ಕಟಾರಿಯಾಗೆ ಸೂಚನೆ ನೀಡಲಾಗಿತ್ತು ಎಂದು ನಂಬಲಾಗಿದೆ. ದಕ್ಷಿಣ ರಾಜಸ್ಥಾನದ ಆರ್‌ಎಸ್‌ಎಸ್ ಬೆಂಬಲಿತ ನಾಯಕ ಕಟಾರಿಯಾ ಅವರು ಅಂತಹ ನಿರೀಕ್ಷೆಯನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರತಿಪಕ್ಷದ ಉಪ ನಾಯಕ ರಾಜೇಂದ್ರ ರಾಥೋಡ್ ಮತ್ತು ಇತರ ನಾಯಕರು ಕಟಾರಿಯಾ ಅವರನ್ನು ರಾಜ್ಯಪಾಲರನ್ನಾಗಿ ಮಾಡಿದ್ದಕ್ಕಾಗಿ ಅಭಿನಂದಿಸಿದ್ದಾರೆ.

ಚುನಾವಣಾ ವರ್ಷದಲ್ಲಿ ಯುವ ಪೀಳಿಗೆಗೆ ನಾಯಕತ್ವದ ಅಧಿಕಾರವನ್ನು ನೀಡುವಲ್ಲಿ ಈ ಕ್ರಮವು  ಉತ್ತಮವಾಗಿ  ಕಂಡುಬರುತ್ತದೆ. ಆದರೆ, ಈಗ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಯಾರಾಗುತ್ತಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ. ಸದ್ಯ ವಿಧಾನಸಭೆ ಕಲಾಪ ನಡೆಯುತ್ತಿರುವುದರಿಂದ ಬಜೆಟ್‌ಗೆ ಉತ್ತರ ನೀಡಬೇಕಿದೆ. ಹೀಗಿರುವಾಗ ಇಂದು ಅಥವಾ ನಾಳೆ ವಿರೋಧ ಪಕ್ಷದ ನಾಯಕರ ಹೆಸರು ಘೋಷಣೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಆರ್‌ಎಸ್‌ಎಸ್ ಬೆಂಬಲಿತ ಕಟಾರಿಯಾ ಅವರು ಮಾಜಿ ಸಿಎಂ ವಸುಂಧರಾ ರಾಜೆ ಅವರಿಗೆ ಪರ್ಯಾಯವಾಗಿ ಕಾಣಿಸಿಕೊಂಡಿದ್ದರು. ಇದು ರಾಜ್ಯದ ಮುಖ್ಯವಾಹಿನಿಯ ರಾಜಕೀಯದಲ್ಲಿ ರಾಜೇ ಅವರ ಪುನರ್ವಸತಿಗೆ ಕಾರಣವಾಗಬಹುದೇ ಎಂದು ಈಗ ರಾಜಕೀಯ ವಲಯಗಳಲ್ಲಿ ಚರ್ಚೆಯ ವಿಷಯವಾಗಿದೆ. ರಾಜೇ ಅವರಲ್ಲದೆ, ವಿರೋಧ ಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್, ಮಾಜಿ ಅಸೆಂಬ್ಲಿ ಸ್ಪೀಕರ್ ಕೈಲಾಶ್ ಮೇಘವಾಲ್ ಸೇರಿದಂತೆ ಅನೇಕ ನಾಯಕರು ಎಲ್‌ಒಪಿ ರೇಸ್‌ನಲ್ಲಿದ್ದಾರೆ.


Stay up to date on all the latest ದೇಶ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp