ಉತ್ತರ ಪ್ರದೇಶ: ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ

11ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಿಜ್ನೋರ್: 11ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ದಲಿತ ವಿದ್ಯಾರ್ಥಿ ನೀಡಿದ ದೂರಿನ ಪ್ರಕಾರ, ಭಾನುವಾರ ನಡೆದ 12ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಜ್ ತಿಳಿಸಿದ್ದಾರೆ.

ವಿದ್ಯಾರ್ಥಿಯು ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದನು. ನಂತರ ಪ್ರಾಂಶುಪಾಲ ಯೋಗೇಂದ್ರ ಕುಮಾರ್ ಮತ್ತು ಇತರರು ಆತನ ಮೇಲೆ ಹಲ್ಲೆ ನಡೆಸಿ, ನಿಂದಿಸಿದ್ದಾರೆ ಎಂದು ಅರ್ಜ್ ಹೇಳಿದ್ದಾರೆ.

ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಏಳು ಮಂದಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಸರ್ಕಲ್ ಅಧಿಕಾರಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com