2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪರ್ಧಿಯೇ ಇಲ್ಲ, ದೇಶದ ಜನ ಪ್ರಧಾನಿ ಮೋದಿ ಜೊತೆ ಪೂರ್ಣಮನಸ್ಸಿನಿಂದ ಮುನ್ನಡೆಯುತ್ತಿದ್ದಾರೆ: ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳಿಂದ ತಳಮಟ್ಟದ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯಾಗಿದೆ ಪ್ರತಿಪಾದಿಸಿದ್ದಾರೆ.
ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ
ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

ಅಗರ್ತಲಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳಿಂದ ತಳಮಟ್ಟದ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯಾಗಿದೆ ಪ್ರತಿಪಾದಿಸಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಇಲ್ಲ ಎಂದು ಕೂಡ ಹೇಳಿದ್ದಾರೆ. ದೇಶದ ಜನತೆ ಪೂರ್ಣ ಹೃದಯದಿಂದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಾಗುತ್ತಿದ್ದಾರೆ.2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ, ಇದುವರೆಗೆ ಯಾವುದೇ ಪಕ್ಷಕ್ಕೆ ಪ್ರಬಲ ವಿರೋಧ ಪಕ್ಷದ ಸ್ಥಾನವನ್ನು ಜನರು ನೀಡಿಲ್ಲ ಎಂದಿದ್ದಾರೆ. 

ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಶಾ ಅವರು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಪ್ರಚಾರ ಮಾಡದೇ ಇರಬಹುದು ಆದರೆ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳ ಫಲಿತಾಂಶವು ಒಂದು ಕಾಲದಲ್ಲಿ ಪ್ರಾಬಲ್ಯ ಹೊಂದಿರುವ ರಾಜ್ಯಗಳಲ್ಲಿ ವಿರೋಧ ಪಕ್ಷದ ಬಲವನ್ನು ತೋರಿಸುತ್ತದೆ ಎಂದು ಹೇಳಿದರು.

ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಸೇರಿದಂತೆ ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ತೋರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಆಂತರಿಕ ಭದ್ರತೆಯನ್ನು ಹೆಚ್ಚಿಸಲು ಮತ್ತು ರಕ್ಷಣೆಯ ಮೇಲೆ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರವು ತೆಗೆದುಕೊಂಡ ಕ್ರಮಗಳ ಹೊರತಾಗಿ ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕ ದೇಶವಾಗಿದೆ. 

ದೇಶದ ಪ್ರಗತಿ, ದೇಶವನ್ನು ಸುಭದ್ರಗೊಳಿಸುವುದು ಮತ್ತು ಆರ್ಥಿಕತೆಯನ್ನು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನಾಗಿ ಮಾಡುವುದು ಸರ್ಕಾರದ ಆದ್ಯತೆಯಾಗಿದೆ ಎಂದರು. ವಿಶ್ವದಲ್ಲಿ ಭಾರತದ ಸಾಧನೆಗೆ ಮನ್ನಣೆ ಸಿಕ್ಕಿದೆ ಎಂದು ಕೂಡ ಹೇಳಿದರು. 

"ಕಳೆದ ಎಂಟು ವರ್ಷಗಳ ಸಣ್ಣ ಅವಧಿಯಲ್ಲಿ, ನಾವು ದೇಶದ 60 ಕೋಟಿ ಬಡವರ ಜೀವನಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಿದ್ದೇವೆ ಮತ್ತು ಅದರಲ್ಲಿ ಯಶಸ್ವಿಯಾಗಿದ್ದೇವೆ. ಹಲವಾರು ಸಾಧನೆಗಳು ಆಗಿವೆ. ರೈಲ್ವೆಯಲ್ಲಿ ಪ್ರಮುಖ ಬದಲಾವಣೆಗಳಿವೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ನೀತಿ ಮತ್ತು ನಾವು ಆ ವಲಯದಲ್ಲಿ ಮುಂಚೂಣಿಯಲ್ಲಿರಲು ತಯಾರಿ ನಡೆಸುತ್ತಿದ್ದೇವೆ, ಹೊಸ ನೀತಿಯೊಂದಿಗೆ ಡ್ರೋನ್ ವಲಯದಲ್ಲಿ ಸಾಕಷ್ಟು ಮುನ್ನಡೆಯುತ್ತಿದ್ದೇವೆ ಎಂದರು. 

ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಯಶಸ್ವಿ ಪ್ರಯತ್ನ: ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ಪ್ರಯತ್ನಗಳು ಮತ್ತು ಎಂಟು ವರ್ಷಗಳಲ್ಲಿ ಭಾರತವು ಇತರ ದೇಶಗಳ ಮೇಲಿನ ಅವಲಂಬನೆಯನ್ನು ಶೇಕಡಾ 30 ರಷ್ಟು ಕಡಿಮೆಗೊಳಿಸಿರುವುದು ದೊಡ್ಡ ಸಾಧನೆಯಾಗಿದೆ. 

"ಎಡಪಂಥೀಯ ಉಗ್ರವಾದವು ಕೊನೆಯ ಹಂತದಲ್ಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಮೇಲೆ ನಮ್ಮ ಏಜೆನ್ಸಿಗಳ ನಿಯಂತ್ರಣ ಪ್ರಾಬಲ್ಯವಿದೆ. ಈಶಾನ್ಯ ಭಾಗದಲ್ಲಿ ನಾವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. 8,000 ಕ್ಕೂ ಹೆಚ್ಚು ಉಗ್ರಗಾಮಿ ಸಂಘಟನೆಗಳ ಸದಸ್ಯರು ಮುಖ್ಯವಾಹಿನಿಗೆ ಸೇರಿಕೊಂಡಿದ್ದಾರೆ ಎಂದರು. 

ಕೇಂದ್ರ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ತಳಮಟ್ಟದವರೆಗೂ ತಲುಪಿವೆ ಎಂದರು. ತ್ರಿಪುರಾದಲ್ಲಿ ಬಡ ಕುಟುಂಬಕ್ಕೆ ಸೇರಿದ ಮನೆಗೆ ಊಟಕ್ಕೆ ಹೋಗಿದ್ದೆ. ಅವರು ನನಗೆ ಶೌಚಾಲಯ, ಗ್ಯಾಸ್ ಸಿಲಿಂಡರ್, ವಿದ್ಯುತ್ ಮತ್ತು ನಳ್ಳಿ ನೀರು ಮತ್ತು ಆಯುಷ್ಮಾನ್ ಭಾರತ್ ಕಾರ್ಡ್ ತೋರಿಸಿದರು.ಕೇಂದ್ರದ ಯೋಜನೆಗಳು ಜನತೆಗೆ ತಲುಪುತ್ತಿವೆ ಎಂದು ಅರ್ಥವಲ್ಲವೇ ಎಂದು ಕೇಳಿದರು. 

ಕೇಂದ್ರ ಸರ್ಕಾರದ ಮೂಲಕ ಪಡಿತರವನ್ನು ಪಡೆಯುವುದರಿಂದ ಅದನ್ನು ಮಾರಾಟ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಮನೆಗೆ ಪ್ಲಾಸ್ಟರ್ ಹಾಕಿದ್ದು, ಹೆಮ್ಮೆಯ ಭಾವ ಮೂಡಿದೆ. 

ಬಿಜೆಪಿಗೆ ಸ್ಪರ್ಧಿಯೇ ಇಲ್ಲ: 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ವಿರೋಧ ಪಕ್ಷದ ಬಗ್ಗೆ ಕೇಳಿದಾಗ, ಅದು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಆಗಿದೆಯೇ ಎಂದಾಗ. ಅದನ್ನು ದೇಶದ ಜನರು ನಿರ್ಧರಿಸುತ್ತಾರೆ ಎಂದು ಹೇಳಿದರು. ಇಲ್ಲಿಯವರೆಗೆ ಜನರು ಲೋಕಸಭೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಪ್ರಧಾನ ವಿರೋಧದ ಹಣೆಪಟ್ಟಿ ನೀಡಿಲ್ಲ ಎಂದರು. 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತ್ ಜೋಡೋ ಯಾತ್ರೆಯ ನಂತರ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ, ಮೂರು ರಾಜ್ಯಗಳಲ್ಲಿ ಚುನಾವಣೆ ಇದೆ. ಭಾರತ್ ಜೋಡೋ ಯಾತ್ರೆಯ ಪ್ರಭಾವ ಏನೆಂದು ನೋಡಬೇಕು ಎಂದು ಶಾ ಹೇಳಿದರು.

ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭೆಗೆ ಇದೇ ತಿಂಗಳಾಂತ್ಯದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುತ್ತಿರುವ ಮೂರು ರಾಜ್ಯಗಳು ಹಿಂದೆ ಕಾಂಗ್ರೆಸ್ ಬಲಿಷ್ಠ ರಾಜ್ಯಗಳಾಗಿದ್ದವು, ಇಲ್ಲಿ ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com