ಮುಂಬೈ: ಏಕನಾಥ್ ಶಿಂಧೆ ಬಣದ ಶಿವಸೇನೆಯೆ ನಿಜವಾದ ಶಿವಸೇನೆ ಎಂಬ ಚುನಾವಣಾ ಆಯೋಗದ ನಿರ್ಧಾರ ಎಲ್ಲವನ್ನೂ ಸ್ಪಷ್ಟಪಡಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್, ಉದ್ಧವ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ.
ಪಕ್ಷದ ಕಾರ್ಯಕರ್ತರ ಬೆಂಬಲ ಯಾರೆಡೆಗೆ ಇದೆ ಎಂಬುದನ್ನು ಮಹಾರಾಷ್ಟ್ರದ ಮಾಜಿ ಸಿಎಂ ಠಾಕ್ರೆ ಅರ್ಥ ಮಾಡಿಕೊಳ್ಳಬೇಕೆಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ಕಳೆದುಕೊಂಡಿದ್ದರ ಬಗ್ಗೆ ಪಶ್ಚಾತ್ತಾಪಪಟ್ಟು ಪ್ರಯೋಜನವಿಲ್ಲ ಎಂದು ಠಾಕ್ರೆಗೆ ಠಾಕೂರ್ ಹೇಳಿದ್ದಾರೆ. ಶಿವಸೇನೆಯ ಮೇಲಿನ ಹಿಡಿತಕ್ಕೆ ಸಂಬಂಧಿಸಿದಂತೆ ಠಾಕ್ರೆ-ಏಕನಾಥ್ ಶಿಂಧೆ ಬಣದ ನಡುವೆ ಕಾನೂನು ಸಮರ ನಡೆದಿತ್ತು.
ಇದನ್ನೂ ಓದಿ: 'ಮೊಗಾಂಬೋ ಖುಷ್ ಹುವಾ': ಶಿವಸೇನೆಯ ಬಿಲ್ಲು ಬಾಣ ಕಳೆದುಕೊಂಡ ನಂತರ ಅಮಿತ್ ಶಾಗೆ ಉದ್ಧವ್ ಠಾಕ್ರೆ ಟಾಂಗ್!
ಶಿವಸೇನೆಯ ಸಂಖ್ಯಾಬಲವೇ ಎಲ್ಲಾ ಕಥೆಗಳನ್ನೂ ಹೇಳುತ್ತದೆ ಎಂದು ಠಾಕೂರ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ.
Advertisement