ನವದೆಹಲಿ: ನ್ಯಾಯಾಲಯದ ಮುಂದೆ ಹಾಜರಾದ ಮನೀಶ್ ಸಿಸೋಡಿಯಾ

ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ  ನಗರದ ನ್ಯಾಯಾಲಯವೊಂದರ ಮುಂಭಾಗ ಸೋಮವಾರ ಹಾಜರಾದರು.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ  ನಗರದ ನ್ಯಾಯಾಲಯವೊಂದರ ಮುಂಭಾಗ ಸೋಮವಾರ ಹಾಜರಾದರು.

 ರೋಸ್ ಅವಿನ್ಯೂ  ವಿಶೇಷ ನ್ಯಾಯಾಧೀಶ ಎಂಕೆ ನಾಗಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಹಾಜರುಪಡಿಸಿದ್ದು, ವಿಚಾರಣೆಗಾಗಿ ಅವರನ್ನು ಐದು ದಿನಗಳ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಕೋರ್ಟ್ ಆವರಣದ ಒಳಗೆ ಹಾಗೂ ಹೊರಗೆ ಬಿಗಿ ಭದ್ರತೆ ಆಯೋಜಿಸಲಾಗಿತ್ತು. 2021-22ಕ್ಕೆ ಈಗ ರದ್ದಾದ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಸಂಜೆ ಸಿಸೋಡಿಯಾ ಅವರನ್ನು ಬಂಧಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com