ಕಾಂಗ್ರೆಸ್ ಮುಖಂಡ ಧಾರಿವಾಲ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಮಹಿಳೆ!

ಪಂಜಾಬ್‌ನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಮೇಜರ್ ಸಿಂಗ್ ಧರಿವಾಲ್ ರನ್ನು ಇಂದು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಮೇಜರ್ ಸಿಂಗ್ ಧರಿವಾಲ್
ಮೇಜರ್ ಸಿಂಗ್ ಧರಿವಾಲ್

ತರನ್ ತರಣ್(ಪಂಜಾಬ್‌): ಪಂಜಾಬ್‌ನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಮೇಜರ್ ಸಿಂಗ್ ಧರಿವಾಲ್ ರನ್ನು ಇಂದು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ತರನ್ ತರಣ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಮೇಜರ್ ಸಿಂಗ್ ಧರಿವಾಲ್ ಅವರ ರೆಸಾರ್ಟ್ ಎಸ್‌ಬಿಐನಲ್ಲಿ ಕುಳಿತಿದ್ದಾಗ ಮಹಿಳೆ ಗುಂಡಿನ ದಾಳಿ ನಡೆಸಿದ್ದಾರೆ.

ಮಾಹಿತಿಯ ಪ್ರಕಾರ, ಈ ಸಮಯದಲ್ಲಿ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅವರ ಕಚೇರಿಗೆ ನುಗ್ಗಿ ಮೇಜರ್ ಸಿಂಗ್ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯ ನಂತರ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೇಜರ್ ಸಿಂಗ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ನಗರಪಟ್ಟಿ ಠಾಣೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅಮನದೀಪ್ ಕೌರ್ ಎಂಬ ಮಹಿಳೆ ಮೇಜರ್ ಸಿಂಗ್ ಕಚೇರಿಗೆ ಬಂದು ಕಚೇರಿಯಲ್ಲಿಟ್ಟಿದ್ದ ಮೇಜರ್ ಸಿಂಗ್ ಅವರ ರಿವಾಲ್ವರ್ ತೆಗೆದುಕೊಂಡು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ರಕ್ತಸಿಕ್ತರಾಗಿ ಬಿದ್ದಿದ್ದ ಸಿಂಗ್ ರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರು. ಆದರೆ ಈ ಮಧ್ಯೆ ಮೇಜರ್ ಸಿಂಗ್ ಮಾರ್ಗಮಧ್ಯೆ ಸಾವನ್ನಪ್ಪಿದರು. ಇದೀಗ ಅಮನ್‌ದೀಪ್ ಕೌರ್ ರನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಘಟನೆಯ ನಂತರ ಸ್ಥಳಕ್ಕಾಗಮಿಸಿದ ಡಿಎಸ್ಪಿ ಪಟ್ಟಿ ಸತ್ನಾಮ್ ಸಿಂಗ್, ಆರೋಪಿ ಮಹಿಳೆ ಅಮನದೀಪ್ ಕೌರ್ ಪ್ರಸ್ತುತ ತಲೆಮರೆಸಿಕೊಂಡಿದ್ದಾಳೆ. ಆಕೆಯೊಂದಿಗೆ ಮೇಜರ್ ಸಿಂಗ್ ಅವರ ರಿವಾಲ್ವರ್ ಅನ್ನು ಸಹ ತೆಗೆದುಕೊಂಡು ಹೋಗಿದ್ದಾರೆ. ಅಮನ್ದೀಪ್ ಕೌರ್ ರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com