ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿದ್ದು, ಕರ್ತವ್ಯ ನಿರತ ಯೋಧರಿಂದಲೇ ಶಂಕಿತರು ರೈಫಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿದ್ದು, ಕರ್ತವ್ಯ ನಿರತ ಯೋಧರಿಂದಲೇ ಶಂಕಿತರು ರೈಫಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.

ಪುಲ್ವಾಮಾದ ರಾಜ್‌ಪೋರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಯೋಧರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಿಆರ್‌ಪಿಎಫ್ ಯೋಧರ ಬಳಿ ಇದ್ದ ರೈಫಲ್ ಅನ್ನು ಕಿತ್ತುಕೊಂಡ ಪರಾರಿಯಾಗಿದ್ದಾರೆ. 

ರಾಜ್‌ಪೋರಾ ಪ್ರದೇಶದ ಬೆಲ್ಲೋ ಗ್ರಾಮದಲ್ಲಿ ಸಿಆರ್‌ಪಿಎಫ್ ಸೈನಿಕರಿಂದ ಅಪರಿಚಿತ ವ್ಯಕ್ತಿಯೊಬ್ಬ ರೈಫಲ್ ಅನ್ನು ಕಸಿದುಕೊಂಡಿದ್ದಾನೆ. ಈ ರೈಫಲ್ ಸಿಆರ್‌ಪಿಎಫ್ ಪಡೆ 183 ಬೆಟಾಲಿಯನ್‌ಗೆ ಸೇರಿದ್ದಾಗಿದ್ದು, ಇದೀಗ ಶಂಕಿತರ ಹೆಡೆಮುರಿ ಕಟ್ಟಲು ಸೇನೆ ಘಟನಾ ಪ್ರದೇಶವನ್ನು ಸುತ್ತುವರೆದಿದ್ದು, ನಾಕಾಬಂದಿ ಹಾಕಿ ತೀವ್ರ ಶೋಧ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com