social_icon

ಅಗ್ನಿಪಥ್ ಯೋಜನೆಯಡಿ ಮೊದಲ ಬ್ಯಾಚ್‌ನ ತರಬೇತಿ ಜನವರಿ 1 ರಿಂದ ಆರಂಭ

ಅಗ್ನಿಪಥ್‌ನ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ಸೇನೆ ಮತ್ತು ವಾಯುಪಡೆಗೆ ಆಯ್ಕೆಯಾಗಿರುವ ಯುವಕರು ತಮ್ಮ ತಮ್ಮ ತರಬೇತಿ ಕೇಂದ್ರಗಳನ್ನು ತಲುಪಿದ್ದು, ಭಾರತೀಯ ವಾಯುಸೇನೆ ಸೇರುವವರಿಗೆ...

Published: 02nd January 2023 04:16 PM  |   Last Updated: 02nd January 2023 04:16 PM   |  A+A-


singh

ಏರ್ ಮಾರ್ಷಲ್ ಮನವೇಂದ್ರ ಸಿಂಗ್

The New Indian Express

ನವದೆಹಲಿ: ಅಗ್ನಿಪಥ್‌ನ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ಸೇನೆ ಮತ್ತು ವಾಯುಪಡೆಗೆ ಆಯ್ಕೆಯಾಗಿರುವ ಯುವಕರು ತಮ್ಮ ತಮ್ಮ ತರಬೇತಿ ಕೇಂದ್ರಗಳನ್ನು ತಲುಪಿದ್ದು, ಭಾರತೀಯ ವಾಯುಸೇನೆ ಸೇರುವವರಿಗೆ ಭಾನುವಾರದಿಂದಲೇ ತರಬೇತಿ ಆರಂಭವಾಗಿದೆ.

ಏರ್‌ಮೆನ್ ಟ್ರೈನಿಂಗ್ ಸ್ಕೂಲ್(ಎಟಿಎಸ್) ಬೆಳಗಾವಿಯಲ್ಲಿ "ಅಗ್ನಿವೀರ್ ವಾಯು'ನ ಮೊದಲ ಬ್ಯಾಚ್‌ನ ತರಬೇತಿ ಇಂದಿನಿಂದ ಪ್ರಾರಂಭವಾಗಿದೆ ಎಂದು ವಾಯುಪಡೆ ಮಾಹಿತಿ ನೀಡಿದೆ.

ಇದನ್ನು ಓದಿ: ಜಮ್ಮು-ಕಾಶ್ಮೀರದಲ್ಲಿ ಅಗ್ನಿಪಥ್ ನೇಮಕಾತಿಗೆ ಭಾರಿ ಬೇಡಿಕೆ; ಸರತಿ ಸಾಲಿನಲ್ಲಿ ನಿಂತ ಸಾವಿರಾರು ಯುವಕರು 

ತರಬೇತಿ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಏರ್ ಮಾರ್ಷಲ್ ಮನವೇಂದ್ರ ಸಿಂಗ್ ಶಾಲೆಗೆ ಭೇಟಿ ನೀಡಿ ಹೊಸದಾಗಿ ನೇಮಕಗೊಂಡ ಬ್ಯಾಚ್ ಅನ್ನು ಉದ್ದೇಶಿಸಿ ಮಾತನಾಡಿದರು.

ಅಲ್ಲದೆ, ತರಬೇತಿ ಮುಗಿದ ನಂತರ ಸೈನಿಕರಾಗಿ ಸೇನೆಗೆ ಸೇರಲು ದೇಶಾದ್ಯಂತ ಅಗ್ನಿಪಥ್ ಯೋಜನೆ ಅಡಿ ನೇಮಕಗೊಂಡ ಯುವಕರು ವಿವಿಧ ತರಬೇತಿ ಕೇಂದ್ರಗಳಿಗೆ ವರದಿ ಮಾಡಿಕೊಂಡಿದ್ದಾರೆ. ಇಂದಿನಿಂದ ತರಬೇತಿ ನೀಡುವುದಾಗಿ ಸೇನಾ ಮುಖ್ಯಸ್ಥ ಜನರಲ್ ಎಂಕೆ ಪಾಂಡೆ ಕಳೆದ ವಾರ ತಿಳಿಸಿದ್ದರು.

ಭಾರತೀಯ ನೌಕಾಪಡೆಯು ಮಹಿಳೆಯರಿಗೂ ತರಬೇತಿಗೆ ಅವಕಾಶ ನೀಡಿದ್ದು, ಒಡಿಶಾದ ಐಎನ್ಎಸ್ ಚಿಲ್ಕಾದಲ್ಲಿರುವ ನಾವಿಕ ತರಬೇತಿ ಸಂಸ್ಥೆಯಲ್ಲಿ 3,000 ಅಗ್ನಿವೀರ್‌ಗಳು ನವೆಂಬರ್‌ನಲ್ಲಿ ತರಬೇತಿ ಪಡೆದಿದ್ದು, ಅದರಲ್ಲಿ 341 ಮಹಿಳೆಯರು ಸೇರಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಮೂರು ವರ್ಷಗಳಿಂದ ಯಾವುದೇ ಸೇನಾ ನೇಮಕಾತಿ ನಡೆಯದ ಕಾರಣ ಈ ನೇಮಕಾತಿಯ ಆರಂಭವು ಸಶಸ್ತ್ರ ಪಡೆಗಳಿಗೆ ಮಹತ್ವದ್ದಾಗಿದೆ.


Stay up to date on all the latest ದೇಶ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp