ರಾಜಸ್ಥಾನ: ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು; 26 ಮಂದಿಗೆ ಗಾಯ 

ರಾಜಸ್ಥಾನದಲ್ಲಿ ಬಾಂದ್ರ-ಜೋಧ್ ಪುರ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು ಪರಿಣಾಮ 26 ಮಂದಿಗೆ ಗಾಯಗಳಾಗಿವೆ.
ರಾಜಸ್ಥಾನದಲ್ಲಿ ಹಳಿ ತಪ್ಪಿದ ರೈಲು
ರಾಜಸ್ಥಾನದಲ್ಲಿ ಹಳಿ ತಪ್ಪಿದ ರೈಲು

ಜೈಪುರ: ರಾಜಸ್ಥಾನದಲ್ಲಿ ಬಾಂದ್ರ-ಜೋಧ್ ಪುರ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು ಪರಿಣಾಮ 26 ಮಂದಿಗೆ ಗಾಯಗಳಾಗಿವೆ.

ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಘಟನೆ ನಡೆದ ಪಾಲಿ ಬಳಿಯ ಬಾಂಗಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಕನಿಷ್ಟ 2 ಗಂಟೆಗಳ ಕಾಲ ವ್ಯತ್ಯಯವಾಗಿದೆ ಅಥವಾ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

ಸಂಜೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ತೀವ್ರವಾಗಿ ಗಾಯಗೊಂಡವರಿಗೆ ರೈಲ್ವೆ ಸಚಿವರು 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದು, ಸಣ್ಣಪುಟ್ಟ ಗಾಯಗಳಾದವರಿಗೆ 25,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಿಗ್ಗೆ 3.27 ರ ವೇಳೆಗೆ 13 ಕೋಚ್ ಗಳು ಹಳಿ ತಪ್ಪಿದ್ದವು. ತಕ್ಷಣವೇ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com