social_icon

ಮರುಕಳಿಸಿದ ದೆಹಲಿ ಮಾದರಿಯ ಅಪಘಾತ: ಸ್ಕೂಟಿಗೆ ಡಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್!

ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. 

Published: 05th January 2023 03:56 AM  |   Last Updated: 05th January 2023 03:57 AM   |  A+A-


Truck rams into woman on scooty

ಅಪಘಾತಕ್ಕೆ ಕಾರಣವಾದ ಟ್ರಕ್

Posted By : Srinivas Rao BV
Source : PTI

ಲಖನೌ: ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. 

ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರು 20 ವರ್ಷದ ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ.

ಬಾಂದಾ ಜಿಲ್ಲೆಯ ಮಾವಿ ಬುಜುರ್ಗ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಟ್ರಕ್ ಚಾಸಿಸ್ ಗೆ ಮಹಿಳೆಯ ದೇಹ ಸಿಲುಕಿಕೊಂಡಿದ್ದು ಬಳಿಕ ಟ್ರಕ್ ಗೆ ಬೆಂಕಿ ಹೊತ್ತಿಕೊಂಡಿದೆ, ಸಂತ್ರಸ್ತೆಯ ಸ್ಕೂಟಿ ಸುಟ್ಟುಹೋಗಿದೆ.

ಇದನ್ನೂ ಓದಿ: ಕಾಂಜಾವಾಲಾ ಪ್ರಕರಣ: ಮಹಿಳೆ ಕಾರಿನಡಿ ಸಿಲುಕಿರುವುದು ಆರೋಪಿಗಳಿಗೆ ತಿಳಿದಿತ್ತು- ಪ್ರತ್ಯಕ್ಷದರ್ಶಿಗಳು

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮಹಿಳೆಯ ಮೃತದೇಹವನ್ನು ಟ್ರಕ್ ನಿಂದ ಹೊರತೆಗೆಯಲಾಗಿದೆ

ಈ ಬಗ್ಗೆ ಆಂಗ್ಲ ಮಾಧ್ಯಮವೊಂದಕ್ಕೆ ಮಾತನಾಡಿರುವ ವಿವಿಯೊಂದರ ಪಿಆರ್ ಒ ಬಿಕೆ ಗುಪ್ತ, ಸಂತ್ರಸ್ತೆಯನ್ನು ಪುಷ್ಪ ಎಂದು ಗುರುತಿಸಿದ್ದು, ವಿವಿಯಲ್ಲಿ ಆಕೆ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಿದ್ದಾರೆ. ಆಕೆ ಮನೆಗೆ ಅಗತ್ಯವಿರುವ ಪದಾರ್ಥಗಳನ್ನು ತರಲು ಹಾಗೂ ಪೆಟ್ರೋಲ್ ತುಂಬಿಸಿಕೊಂಡು ಬರಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ದೆಹಲಿ ಮಹಿಳೆ ಸಾವು ಪ್ರಕರಣ: ಲೈಂಗಿಕ ದೌರ್ಜನ್ಯ ಆರೋಪ ತಳ್ಳಿಹಾಕಿದ ಮರಣೋತ್ತರ ಪರೀಕ್ಷೆ

ಮಹಿಳೆಯ ಸ್ಕೂಟಿಗೆ ಟ್ರಕ್ ಡಿಕ್ಕಿ ಹೊಡೆದ ಬಳಿಕ ಮಹಿಳೆಯ ದೇಹ ಟ್ರಕ್ ನ ಅಡಿ ಸಿಲುಕಿಕೊಂಡಿದೆ. ಇದನ್ನು ಗಮನಿಸಿದ ಹಲವರು ಟ್ರಕ್ ನ್ನು ನಿಲ್ಲಿಸಲು ಯತ್ನಿಸಿದ್ದಾರಾದರೂ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸಿಲ್ಲ. ನೋ ಬ್ರೇಕರ್ಸ್ ಪ್ರದೇಶದಲ್ಲಿ ಈ ಅಪಘಾತ ಉಂಟಾಗಿದೆ. 

ಮೃತ ಮಹಿಳೆ ಲಖನೌ ನಿವಾಸಿಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಆರೋಪಿ ಚಾಲಕನಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp