ಉಗ್ರರ ಹುಟ್ಟಡಗಿಸಿದ ಸೇನೆ: ಪೂಂಚ್ ಎನ್ಕೌಂಟರ್ ನಲ್ಲಿ ಇಬ್ಬರು ಶಂಕಿತರು ಹತ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಭಾನುವಾರ ಇಬ್ಬರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿದಾಟಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಇದನ್ನೂ ಓದಿ: ಹೊಸ ಉಗ್ರ ಸಂಘಟನೆ ಸ್ಥಾಪಿಸಲು ಸಂಚು ರೂಪಿಸಿದ್ದ ಅಸ್ಸಾಂ ಮಾಜಿ ಶಾಸಕ ಸೇರಿ ಮೂವರ ಬಂಧನ
ಜಿಲ್ಲೆಯ ಬಾಲಕೋಟ್ ಸೆಕ್ಟರ್ನಲ್ಲಿ ಶನಿವಾರ ತಡರಾತ್ರಿ ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಮುಂದಿರುವ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಈ ವೇಳೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅವರು ಹೇಳಿದರು.
ಇಂದು ಬೆಳಗ್ಗೆ ಸೇನೆಯು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಹತರಾದ ಭಯೋತ್ಪಾದಕರ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.