ಬೇಳೆ ಡಬ್ಬದಲ್ಲಿ ಹಾವು; ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವಾರು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ಅಡುಗೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ಅಡುಗೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಬಿಸಿಯೂಟವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ ಎಂದು ಅವರು ಹೇಳಿದರು.

ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ. ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಬೇಕಾಯಿತು ಎಂದು ಹೇಳಿದರು.

ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಸುದ್ದಿಗಾರರಿಗೆ ತಿಳಿಸಿದರು.

ಜನವರಿ 10ರಂದು ಭೇಟಿ ನೀಡಲಿರುವ ಜಿಲ್ಲಾ ಪ್ರಾಥಮಿಕ ಶಾಲೆಗಳ ನಿರೀಕ್ಷಕರಿಗೆ ಮಾಹಿತಿ ನೀಡಿದ್ದೇನೆ ಎಂದು ಜನ ತಿಳಿಸಿದರು.

ಒಬ್ಬರನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲಕರು ಶಾಲೆಯ ಮುಖ್ಯೋಪಾಧ್ಯಾಯರನ್ನು ಘೇರಾವ್ ಹಾಕಿದರು ಮತ್ತು ಅವರ ದ್ವಿಚಕ್ರ ವಾಹನವನ್ನು ಧ್ವಂಸಗೊಳಿಸಿದರು. ಬಳಿಕ ಘೇರಾವ್‌ ತೆಗೆಯಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com