ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ.
Published: 10th January 2023 01:11 PM | Last Updated: 10th January 2023 01:11 PM | A+A A-

ಆರೋಪಿ ಅಫ್ತಾಬ್ ಪೂನಾವಾಲ
ನವದೆಹಲಿ: ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ.
ಇದನ್ನೂ ಓದಿ: ಶ್ರದ್ಧಾ ಕೊಲೆ ಕೇಸ್: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ನಾಲ್ಕು ದಿನ ವಿಸ್ತರಣೆ
ಆರೋಪಿ ಪೂನಾವಾಲನನ್ನು ಇಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.
ಜನವರಿ 6 ರಂದು ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿತು. ಇದೀಗ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತಾರಗೊಂಡಿದೆ.