ಮಧ್ಯ ಪ್ರದೇಶ: ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ

ಮಧ್ಯ ಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ಅಶೋಕನಗರ: ಮಧ್ಯ ಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬರ್ಖೇಡಾ ಜಾಗೀರ್ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ದೇಹತ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪಹಲ್ವಾನ್ ಚೌಹಾನ್ ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯ ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರ ಸಾವಿನ ಸುದ್ದಿಯನ್ನು ಅವರ ಕುಟುಂಬ ಸದಸ್ಯರೊಂದಿಗೆ ಫೋನ್‌ನಲ್ಲಿ ಹಂಚಿಕೊಂಡ ನಂತರ ಹೊರಗೆ ಹೋದ ಹುಡುಗಿ ಹಿಂತಿರುಗಲಿಲ್ಲ ಎಂದು ಅವರು ಹೇಳಿದರು.

ಆಕೆಯ ಕುಟುಂಬ ಸದಸ್ಯರು ಮತ್ತು ಸ್ಥಳೀಯರು ಹುಡುಕಾಟ ಆರಂಭಿಸಿದ್ದು, ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com