social_icon

ಕ್ರೀಡಾಪಟುಗಳ ಪ್ರತಿಭಟನೆ ಒಂದು ಪಿತೂರಿ: ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಿರಸ್ಕರಿಸಿದ ಡಬ್ಲ್ಯುಎಫ್‌ಐ

ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್‌ಐ ತಿರಸ್ಕರಿಸಿದೆ.

Published: 21st January 2023 07:33 PM  |   Last Updated: 21st January 2023 07:46 PM   |  A+A-


ಬ್ರಿಜ್ ಭೂಷಣ್ ಶರಣ್ ಸಿಂಗ್

Posted By : Vishwanath S
Source : The New Indian Express

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್‌ಐ ತಿರಸ್ಕರಿಸಿದೆ.

ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸೇರಿದಂತೆ ಯಾರಿಂದಲೂ ವೈಯಕ್ತಿಕವಾಗಿ WFI ನಲ್ಲಿ ಅನಿಯಂತ್ರಿತ ಅಥವಾ ದುರುಪಯೋಗಕ್ಕೆ ಯಾವುದೇ ಅವಕಾಶವಿಲ್ಲ. ವ್ಯಕ್ತಿಯ ಮಾನಹಾನಿ ಮಾಡುವ ಉದ್ದೇಶದಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ. ಇದರ ಹಿಂದೆ ಕ್ರೀಡಾಪಟುಗಳ ಕೆಲವು ವೈಯಕ್ತಿಕ ಮತ್ತು ಗುಪ್ತ ಅಜೆಂಡಾ ಇದೆ ಎಂದು WFI ಕ್ರೀಡಾ ಸಚಿವಾಲಯಕ್ಕೆ ಮಾಹಿತಿ ನೀಡಿದೆ.

ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಧರಣಿ ನಡೆಸುತ್ತಿದ್ದರು. ಪ್ರಸ್ತುತ, ಆಟಗಾರರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಭರವಸೆಯನ್ನು ಪಡೆದ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಇದನ್ನೂ ಓದಿ: ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ; ಕುಸ್ತಿಪಟುಗಳ ಹೋರಾಟ ಅಂತ್ಯ

ಏನಿದು ಘಟನೆ?
ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿನೇಶ್ ಫೋಗಟ್ ಜನವರಿ 11ರಂದು ಆರೋಪಿಸಿದ್ದರು. ಆದರೆ ಅಧ್ಯಕ್ಷ ಬ್ರಿಜ್ ಭೂಷಣ್ ಈ ಆರೋಪಗಳನ್ನು ತಳ್ಳಿಹಾಕಿದ್ದರು. ಇದೇ ವೇಳೆ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ಮತ್ತು ಒಲಿಂಪಿಯನ್ ವಿನೇಶ್, ಲಖನೌದಲ್ಲಿ ನಡೆದ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತುದಾರರು ಮಹಿಳಾ ಕುಸ್ತಿಪಟುಗಳನ್ನು ಶೋಷಿಸಿದ್ದಾರೆ ಎಂದು ಆರೋಪಿಸಿದ್ದರು. 

ತನಿಖೆಗೆ ಸಮಿತಿ ರಚನೆ
ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ತನಿಖೆಗಾಗಿ ಏಳು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು ಇದರಲ್ಲಿ ಎಂಸಿ ಮೇರಿ ಕೋಮ್ ಮತ್ತು ಯೋಗೇಶ್ವರ್ ದತ್ ಅವರಂತಹ ಕ್ರೀಡಾಪಟುಗಳು ಇದ್ದಾರೆ.

ಇದನ್ನೂ ಓದಿ: ಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಮೀಟೂ ಆರೋಪ: ಸಿಂಗ್ ವಜಾ ಮಾಡುವವರೆಗೂ ಕದಲುವುದಿಲ್ಲ ಎಂದ ಕುಸ್ತಿಪಟುಗಳು!

ಖ್ಯಾತ ಬಾಕ್ಸರ್ ಮೇರಿ ಕೋಮ್ ಮತ್ತು ಕುಸ್ತಿಪಟು ಯೋಗೇಶ್ವರ್ ಅವರಲ್ಲದೆ, ಬಿಲ್ಲುಗಾರ ಡೋಲಾ ಬ್ಯಾನರ್ಜಿ ಮತ್ತು ಭಾರತೀಯ ವೇಟ್‌ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷ ಸಹದೇವ್ ಯಾದವ್ ಕೂಡ ಇದ್ದಾರೆ. ಇಡೀ ಪ್ರಕರಣದಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ರಾಜೀನಾಮೆಗೆ ಆಟಗಾರರು ನಿರಂತರವಾಗಿ ಒತ್ತಾಯಿಸಿದ್ದಾರೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp