ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ: 21 ಅಂಡಮಾನ್-ನಿಕೋಬಾರ್ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ

ಪರಾಕ್ರಮ ದಿವಸ ಅಂಗವಾಗಿ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅಂಡಮಾನ್ ನಿಕೋಬಾರ್ ನ ಅತಿದೊಡ್ಡ ಹೆಸರು ಇಡದಿರುವ ದ್ವೀಪಗಳಿಗೆ ಹೆಸರಿಡುವ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಅನಾವರಣಗೊಳಿಸಿದರು.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಇಂದು ಜನವರಿ 23, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಬಾಷ್ ಚಂದ್ರ ಬೋಸ್ ಅವರ 126ನೇ ಜನ್ಮಜಯಂತಿ. ಕೇಂದ್ರ ಸರ್ಕಾರ 2021ರಲ್ಲಿ ಜನವರಿ 23ನ್ನು ಪರಾಕ್ರಮ ದಿವಸ ಎಂದು ಘೋಷಿಸಿ ಆಚರಿಸಿಕೊಂಡು ಬರುತ್ತಿದೆ.

ಪರಾಕ್ರಮ ದಿವಸ ಅಂಗವಾಗಿ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅಂಡಮಾನ್ ನಿಕೋಬಾರ್ ನ ಅತಿದೊಡ್ಡ ಹೆಸರು ಇಡದಿರುವ ದ್ವೀಪಗಳಿಗೆ ಹೆಸರಿಡುವ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಅನಾವರಣಗೊಳಿಸಿದರು.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ಅತಿದೊಡ್ಡ ಹೆಸರಿಡದ ದ್ವೀಪಗಳಿಗೆ ಹೆಸರಿಡುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಿರುವ ನೇತಾಜಿಗೆ ಸಮರ್ಪಿಸಲಾದ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಅನಾವರಣಗೊಳಿಸಿದರು.

ಸುಬೇದಾರ್ ಮೇಜರ್ ಸಂಜಯ್ ಕುಮಾರ್ ಮತ್ತು ಸುಬೇದಾರ್ ಮೇಜರ್ ಯೋಗೇಂದ್ರ ಸಿಂಗ್ ಯಾದವ್ (ನಿವೃತ್ತ) ಸೇರಿದಂತೆ 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಈ ದ್ವೀಪಗಳಿಗೆ ಇಡಲಾಗಿದೆ.

ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ಹೊಸ ಹೆಸರುಗಳನ್ನು ಪಡೆದಿರುವ 21 ದ್ವೀಪಗಳ ಹೆಸರುಗಳಲ್ಲಿ ಹಲವು ಸಂದೇಶಗಳು ಅಡಕವಾಗಿವೆ. ಏಕ್ ಭಾರತ್, ಶ್ರೇಷ್ಠ ಭಾರತ್; ಈ ಸಂದೇಶ ನಮ್ಮ ಸಶಸ್ತ್ರ ಪಡೆಗಳ ಶೌರ್ಯವನ್ನು ಬಿಂಬಿಸುತ್ತದೆ ಎಂದರು.

ವೀರ ಸಾವರ್ಕರ್ ಮತ್ತು ದೇಶಕ್ಕಾಗಿ ಹೋರಾಡಿದ ಅನೇಕ ವೀರರು ಅಂಡಮಾನ್‌ನ ಈ ನೆಲದಲ್ಲಿ ಬಂಧಿತರಾಗಿದ್ದರು. ನಾನು 4-5 ವರ್ಷಗಳ ಹಿಂದೆ ಪೋರ್ಟ್ ಬ್ಲೇರ್‌ಗೆ ಭೇಟಿ ನೀಡಿದಾಗ ಅಲ್ಲಿನ 3 ಪ್ರಮುಖ ದ್ವೀಪಗಳಿಗೆ ಭಾರತೀಯ ಹೆಸರುಗಳನ್ನು ಇಟ್ಟು ಬಂದಿದ್ದೆ ಎಂದರು.

ತ್ರಿವರ್ಣ ಧ್ವಜ ಹಾರಿಸಿದ ನಾಡು: ಅಂಡಮಾನ್‌ನ ಈ ನಾಡು ಮೊಟ್ಟಮೊದಲ ಬಾರಿಗೆ ತ್ರಿವರ್ಣ ಧ್ವಜವನ್ನು ಹಾರಿಸಿದ ನಾಡು. ಅಲ್ಲಿ ಮೊದಲ ಬಾರಿಗೆ ಸ್ವತಂತ್ರ ಭಾರತದ ಸರ್ಕಾರ ರಚನೆಯಾಯಿತು. ಇಂದು ನೇತಾಜಿ ಸುಭಾಷ್ ಬೋಸ್ ಅವರ ಜನ್ಮದಿನ. ದೇಶವು ಈ ದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುತ್ತದೆ ಎಂದರು. 

ಎಲ್ಲಾ 21 ಪರಮವೀರರಿಗೆ "ಇಂಡಿಯಾ ಫಸ್ಟ್" ಒಂದೇ ನಿರ್ಣಯವಾಗಿತ್ತು; ಇಂದು ಈ ದ್ವೀಪಗಳ ನಾಮಕರಣದಲ್ಲಿ, ಅವುಗಳ ನಿರ್ಣಯವು ಶಾಶ್ವತವಾಗಿ ಅಮರವಾಗಿದೆ. ಅಂಡಮಾನ್‌ನ ಸಾಮರ್ಥ್ಯ ಅಪಾರವಾಗಿದೆ. ಕಳೆದ 8 ವರ್ಷಗಳಲ್ಲಿ ದೇಶವು ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡಿದೆ ಎಂದರು.

21 ಪ್ರಶಸ್ತಿ ಪುರಸ್ಕೃತರು ಯಾರು?
ಹೆಸರಿಸದ ಅತಿದೊಡ್ಡ ದ್ವೀಪಕ್ಕೆ ಭಾರತದ ಮೊದಲ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಸೋಮನಾಥ್ ಶರ್ಮಾ ಅವರ ಹೆಸರನ್ನು ಇಡಲಾಗಿದೆ. ಅವರು 1950 ರಲ್ಲಿ ಮರಣೋತ್ತರ ಪ್ರಶಸ್ತಿಯನ್ನು ಪಡೆದರು. 1947 ರಲ್ಲಿ ಪಾಕಿಸ್ತಾನಿ ದಾಳಿಕೋರರಿಂದ ಶ್ರೀನಗರ ವಿಮಾನ ನಿಲ್ದಾಣವನ್ನು ರಕ್ಷಿಸುವಲ್ಲಿ ಹುತಾತ್ಮರಾಗಿದ್ದರು. 

ದ್ವೀಪಗಳಿಗೆ ಸುಬೇದಾರ್ ಮತ್ತು ಹೊನಿ ಕ್ಯಾಪ್ಟನ್ (ಆಗ ಲ್ಯಾನ್ಸ್ ನಾಯಕ್) ಕರಮ್ ಸಿಂಗ್, 2ನೇ ಲೆಫ್ಟಿನೆಂಟ್ ರಾಮ ರಾಘೋಬಾ ರಾಣೆ ಸೇರಿದಂತೆ ಇತರೆ 20 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗಿದೆ. ನಾಯಕ್ ಜಾದುನಾಥ್ ಸಿಂಗ್; ಕಂಪನಿ ಹವಾಲ್ದಾರ್ ಮೇಜರ್ ಪಿರು ಸಿಂಗ್; ಕ್ಯಾಪ್ಟನ್ ಜಿಎಸ್ ಸಲಾರಿಯಾ; ಲೆಫ್ಟಿನೆಂಟ್ ಕರ್ನಲ್ (ಆಗಿನ ಮೇಜರ್) ಧನ್ ಸಿಂಗ್ ಥಾಪಾ; ಸುಬೇದಾರ್ ಜೋಗಿಂದರ್ ಸಿಂಗ್; ಮೇಜರ್ ಶೈತಾನ್ ಸಿಂಗ್, ಲ್ಯಾನ್ಸ್ ನಾಯಕ್ ಆಲ್ಬರ್ಟ್ ಎಕ್ಕಾ ಇತರ ಪ್ರಶಸ್ತಿ ಪುರಸ್ಕೃತರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ನೇತಾಜಿ ಅವರ ಸ್ಮರಣೆಯನ್ನು ಗೌರವಿಸಲು, ರಾಸ್ ದ್ವೀಪಗಳನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಿದರು. ಶಹೀದ್ ದ್ವೀಪ್ ಮತ್ತು ಸ್ವರಾಜ್ ದ್ವೀಪ್ ಎಂದು ಮರುನಾಮಕರಣ ಮಾಡಲಾಗಿದೆ.

"ದೇಶದ ನಿಜಜೀವನದ ಹೀರೋಗಳಿಗೆ ಸರಿಯಾದ ಗೌರವವನ್ನು ನೀಡುವುದು ಯಾವಾಗಲೂ ಪ್ರಧಾನ ಮಂತ್ರಿಯಿಂದ ಅತ್ಯುನ್ನತ ಆದ್ಯತೆಯಾಗಿದೆ. ಈ ಮನೋಭಾವದೊಂದಿಗೆ ಈಗ ದ್ವೀಪ ಸಮೂಹದ 21 ದೊಡ್ಡ ಹೆಸರಿಸದ ದ್ವೀಪಗಳಿಗೆ 21 ಪರಂ ವೀರ ಚಕ್ರ ಪುರಸ್ಕೃತರ ಹೆಸರಿಸಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com