ತೆಲಂಗಾಣ: ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವಕ್ಕೆ ಗೈರಾದ ಸಿಎಂ ಕೆಸಿಆರ್!

ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಈ ನಡುವೆ ಹೈದರಾಬಾದ್'ನ ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಗೈರು ಹಾಜರಾಗಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.
ಹೈದರಾಬಾದ್ ರಾಜಭವನದಲ್ಲಿ ಧ್ವಜಾರೋಹಣ ನೆರವೇರಿಸಿರುವುದು.
ಹೈದರಾಬಾದ್ ರಾಜಭವನದಲ್ಲಿ ಧ್ವಜಾರೋಹಣ ನೆರವೇರಿಸಿರುವುದು.

ಹೈದರಾಬಾದ್​: ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಈ ನಡುವೆ ಹೈದರಾಬಾದ್'ನ ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಗೈರು ಹಾಜರಾಗಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಇಂದು ಬೆಳಗ್ಗೆ ತೆಲಂಗಾಣ ರಾಜ್ಯಪಾಲೆ ಡಾ.ತಮಿಳಿಸೈ ಸುಂದರ್​ರಾಜನ್​ ಅವರು ಪ್ರಗತಿ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಸಿಕಂದರಾಬಾದ್ ಪರೇಡ್ ಮೈದಾನದಲ್ಲಿರುವ ಅಮರ ಸೈನಿಕರ ಸ್ಮಾರಕದಲ್ಲಿ ಜ್ಯೋತಿ ಬೆಳಗಿಸಿ ನಮನ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿಗಳು ಗೈರು ಹಾಜರಾಗಿರುವುದು ಎದ್ದು ಕಾಣುತ್ತಿತ್ತು.

ರಾಜ್ಯಪಾಲರ ಜೊತೆಗಿನ ಭಿನ್ನಾಭಿಪ್ರಾಯಗಳೇ ಈ ಬೆಳವಣಿಗೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ನಡುವೆ ಸಂಜೆ ರಾಜ್ಯಪಾಲರು ನೀಡುತ್ತಿರುವ ಭೋಜನ ಕೂಟಕ್ಕೂ ಕೆಸಿಆರ್ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ.

ತೆಲಂಗಾಣದಲ್ಲಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಮಧ್ಯೆ ಜಟಾಪಟಿ ನಡೆಯುತ್ತಿದೆ. ಸಿಕಂದರಾಬಾದ್​ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಸುವ ಬದಲು ರಾಜಭವನದಲ್ಲಿಯೇ ಸಮಾರಂಭ ನಡೆಸುವಂತೆ ಸರ್ಕಾರ ರಾಜ್ಯಪಾಲರಿಗೆ ಪತ್ರ ಬರೆದಿತ್ತು.

ಕೋವಿಡ್‌ ಹಿನ್ನೆಲೆಯಲ್ಲಿ ರಾಜಭವನದಲ್ಲಿಯೇ ಗಣರಾಜ್ಯೋತ್ಸವ ಆಚರಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿತ್ತು. ಈ ಬಗ್ಗೆ ರಾಜ್ಯಪಾಲರಾದ ತಮಿಳಿಸೈ ಸುಂದರರಾಜನ್​ ಬೇಸರ ವ್ಯಕ್ತಪಡಿಸಿದ್ದರು. ಕೊರೊನಾ ಹೆಸರಿನಲ್ಲಿ ಯಾವುದೇ ಆಚರಣೆಗಳು ನಡೆಯದಿರುವುದು ಬೇಸರದ ಸಂಗತಿ ಎಂದು ಅಸಮಾಧಾನಗೊಂಡಿದ್ದರು.

ಈ ನಡುವೆ ಗಣರಾಜ್ಯೋತ್ಸವದ ಅಂಗವಾಗಿ ಪರೇಡ್ ಆಯೋಜಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ತೆಲಂಗಾಣ ಹೈಕೋರ್ಟ್ ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು.

ಈ ಹಿಂದೆ ಸಿಕಂದರಾಬಾದ್ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಸಾವಿರಾರು ಮಂದಿ ಕಾರ್ಯಕ್ರಮವನ್ನು ವೀಕ್ಷಿಸುತಿದ್ದರು ಎಂದು ಅರ್ಜಿಯಲ್ಲಿ ಹೇಳಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕೇಂದ್ರ ಸರ್ಕಾರದ ನಿರ್ದೇಶನದಂತೆ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವಂತೆ ಹಾಗೂ ಪರೇಡ್ ಆಯೋಜಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com