ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ

ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.
ಅಮೃತ್ ಉದ್ಯಾನ್
ಅಮೃತ್ ಉದ್ಯಾನ್
Updated on

ನವದೆಹಲಿ: ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.

"ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷವಾಗಿರುವ ಹಿನ್ನೆಲೆಯಲ್ಲಿ 'ಆಜಾದಿ ಕಾ ಅಮೃತ್ ಮಹೋತ್ಸವ'  ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ 'ಅಮೃತ್ ಉದ್ಯಾನ್' ಎಂದು ಸಾಮಾನ್ಯ ಹೆಸರನ್ನು ನೀಡಿದ್ದಾರೆ" ಎಂದು ರಾಷ್ಟ್ರಪತಿಗಳ ಪತ್ರಿಕಾ ಉಪ ಕಾರ್ಯದರ್ಶಿ ನವಿಕಾ ಗುಪ್ತಾ ಅವರು ತಿಳಿಸಿದ್ದಾರೆ.

ಅಮೃತ್ ಉದ್ಯಾನವನ್ನು ಭಾನುವಾರ ಸಾರ್ವಜನಿಕರಿಗಾಗಿ ತೆರೆಯಲಾಗುವುದು ಮತ್ತು ಈ ಬಾರಿ ಸುಮಾರು ಎರಡು ತಿಂಗಳ ಕಾಲ ತೆರೆದಿರುತ್ತದೆ ಎಂದು ಅವರು ಹೇಳಿದ್ದಾರೆ.

ಜನವರಿ 31 ರಿಂದ ಮಾರ್ಚ್ 26 ರವರೆಗೆ ಈ ಉದ್ಯಾನವನ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ. ಇದರ ಹೊರತಾಗಿ, ಕೆಲವು ದಿನಗಳನ್ನು ವಿಶೇಷವಾಗಿ ವಿಕಲಚೇತನರಿಗೆ, ರೈತರು ಮತ್ತು ಮಹಿಳೆಯರುಗೆ ಮೀಸಲಿಡಲಾಗಿದೆ ಎಂದು ನವಿಕಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com