ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್

ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ  ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ.
ನಂದಮೂರಿ ತಾರಕರತ್ನ
ನಂದಮೂರಿ ತಾರಕರತ್ನ

ಕುಪ್ಪಂ: ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ  ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ. 

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಪಾದಯಾತ್ರೆಯಲ್ಲಿ ನಂದಮೂರಿ ತಾರಕ ರತ್ನ ಅವರು ಭಾಗವಹಿಸಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ.  ತಾರಕ ರತ್ನ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸದ್ಯ ಕುಪ್ಪಂನ ಖಾಸಗಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com