1 ಕೋಟಿ ರೂ ವೆಚ್ಚದಲ್ಲಿ ಮಗಳ ಮದುವೆಗೆ ಸಿದ್ಧತೆ.. ಆದರೆ ಮದುವೆಗೂ ಮುನ್ನವೇ ಪತ್ನಿಯ ಕೊಂದು ತಾನೂ ಆತ್ಮಹತ್ಯೆ!
ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕು ಎಂಬ ಕನಸು ಹೊತ್ತಿದ್ದ ತಂದೆಯೋರ್ವ ಮಗಳ ಮದುವೆಗೂ ಮುನ್ನವೇ ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
Published: 29th January 2023 07:09 PM | Last Updated: 29th January 2023 07:09 PM | A+A A-

ಸಾಂದರ್ಭಿಕ ಚಿತ್ರ
ಭೋಪಾಲ್: ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕು ಎಂಬ ಕನಸು ಹೊತ್ತಿದ್ದ ತಂದೆಯೋರ್ವ ಮಗಳ ಮದುವೆಗೂ ಮುನ್ನವೇ ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಪನ್ನಾದಲ್ಲಿ ಈ ಘಟನೆ ನಡೆದಿದ್ದು, ಉದ್ಯಮಿ ಸಂಜಯ್ ಸೇಠ್ ತನ್ನ ಪತ್ನಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಉದ್ಯಮಿ ಸಂಜಯ್ ಸೇಠ್ ತಮ್ಮ ಮಗಳ ಮದುವೆಯನ್ನು 1 ಕೋಟಿ ರೂ. ವೆಚ್ಚದಲ್ಲಿ ಮಾಡಬೇಕೆನ್ನುವ ಕನಸು ಕಂಡಿದ್ದರು. ಆದರೆ ಅವರಿಂದ ಹಣಪಡೆದ ಕೆಲವು ಮಂದಿ ಸರಿಯಾದ ಸಮಯಕ್ಕೆ ಹಣ ವಾಪಸ್ ನೀಡಲೇ ಇಲ್ಲ. ಅವರ ಬಳಿ ಕೇವಲ 29 ಲಕ್ಷ ರೂ ಹಣ ಮಾತ್ರ ಇತ್ತು. ಮಗಳ ಮದುವೆಯನ್ನು ವಿಜೃಂಭಣೆಯಿಂದ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಕೊರಗಿನಿಂದಾಗಿ ಸಾವಿನ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: 2 ತಿಂಗಳ ಹಿಂದೆ ಒಬ್ಬಳೆ ಮಗಳ ಕೊಲೆ: ದುಃಖ ಸಹಿಸಲಾಗದೇ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!
ಉದ್ಯಮಿ ಸಂಜಯ್ ಸೇಠ್ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ. ಶವದ ಮೇಲೆ ಗುಂಡಿನ ಗುರುತುಗಳಿದ್ದವು. ಘಟನಾ ಸ್ಥಳದಿಂದ ಪೊಲೀಸರಿಗೆ ಸೂಸೈಡ್ ನೋಟ್ ಸಿಕ್ಕಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಂಜಯ್ ಸೇಠ್ ಅವರು ತಮ್ಮ ಪತ್ನಿ ಮೀನು ಜೊತೆ ನಗರದ ಹೃದಯ ಭಾಗದಲ್ಲಿರುವ ಕಿಶೋರ್ ಗಂಜ್ ಪ್ರದೇಶದಲ್ಲಿ ವಾಸವಾಗಿದ್ದರು. ಘಟನೆಯ ವೇಳೆ ಸಂಜಯ್ ಮತ್ತು ಮೀನು ಇಬ್ಬರೂ ಮನೆಯ ಎರಡನೇ ಮಹಡಿಯ ಕೊಠಡಿಯಲ್ಲಿದ್ದರು. ಗುಂಡಿನ ಸದ್ದು ಕೇಳಿದ ನಂತರ ಕುಟುಂಬದ ಇತರ ಸದಸ್ಯರು ಮಹಡಿಗೆ ಬಂದರು. ಮಹಿಳೆ ಆಗಲೇ ಸಾವನ್ನಪ್ಪಿದ್ದಳು, ಆದರೆ ಸಂಜಯ್ ಇನ್ನೂ ಉಸಿರಾಡುತ್ತಿದ್ದರು. ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರೂ ಮೃತಪಟ್ಟಿದ್ದರು.
ಇದನ್ನೂ ಓದಿ: 'ವಿಮಾನ ಹೈಜಾಕ್ ಟ್ವೀಟ್' ಸ್ಪೈಸ್ ಜೆಟ್ ಪ್ರಯಾಣಿಕ ಜೈಲಿಗೆ!
ಪನ್ನಾ ಪೊಲೀಸ್ ಅಧೀಕ್ಷಕ ಧರ್ಮರಾಜ್ ಮೀನಾ ಮಾತನಾಡಿ, ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಹೊರಗಿನವರು ಭಾಗಿಯಾಗಿರುವಂತೆ ತೋರುತ್ತಿಲ್ಲ, ದಂಪತಿಗಳು ಆ ಕೋಣೆಯಲ್ಲಿ ಇಬ್ಬರೇ ಇದ್ದರು, ನಾವು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಉದ್ಯಮಿ ಸಂಜಯ್ ಸೇಠ್ ಬಾಗೇಶ್ವರ ಧಾಮದ ಭಕ್ತರಾಗಿದ್ದರು. ಅವರ ಆತ್ಮಹತ್ಯೆ ಪತ್ರದಲ್ಲಿ ಗುರೂಜಿ, ನನ್ನನ್ನು ಕ್ಷಮಿಸಿ, ನನಗೆ ಇನ್ನೊಂದು ಜನ್ಮ ಸಿಕ್ಕರೆ, ನಾನು ಅದನ್ನು ನಿಮ್ಮ ನಿಷ್ಠಾವಂತ ಭಕ್ತನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ ಪೊಲೀಸ್ ಕಮಾಂಡೋ ಮುದಾಸಿರ್ ಅಹ್ಮದ್ ಶೇಖ್ ಗೆ ಮರಣೋತ್ತರವಾಗಿ ಶೌರ್ಯ ಪ್ರಶಸ್ತಿ
ಆತ್ಮಹತ್ಯೆಗೂ ಮುನ್ನ ವಿಡಿಯೋ
ಘಟನೆಗೂ ಮುನ್ನ ಸಂಜಯ್ ಸೇಠ್ ಅವರು ಅಳುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ. ಬಹಳಷ್ಟು ಮಂದಿ ನನ್ನಿಂದ ಪಡೆದ ಸಾಲವನ್ನು ಮರುಪಾವತಿಸಿಲ್ಲ, ದಯವಿಟ್ಟು ನನ್ನ ಮಕ್ಕಳಿಗಾಗಿ, ನನ್ನ ಮಗಳ ಮದುವೆಗಾಗಿ ನನ್ನ ಹಣವನ್ನು ಹಿಂತಿರುಗಿಸಿ, ಅವಳ ಮದುವೆಯನ್ನು 50 ಲಕ್ಷದಿಂದ 1 ಕೋಟಿಯಲ್ಲಿ ಆಯೋಜಿಸಬೇಕೆನ್ನುವ ಆಸೆ ನನಗಿತ್ತು, ನನ್ನ ಮಗಳ ಖಾತೆಯಲ್ಲಿ 29 ಲಕ್ಷ ರೂ ಹಣವಿದೆ. ಮಗಳ ಮದುವೆ ಹಾಗೆಯೇ ನಡೆಯಬೇಕು, ನನ್ನ ಹೆಂಡತಿ ಮತ್ತು ನಾನು ಇಬ್ಬರೂ ದೂರ ಹೋಗುತ್ತಿದ್ದೇವೆ, ಬದುಕಲು ಸಾಧ್ಯವಾಗುತ್ತಿಲ್ಲ, ಮಕ್ಕಳೇ ನಮ್ಮನ್ನು ಕ್ಷಮಿಸಿಬಿಡಿ ಎಂದು ಬರೆದಿದ್ದಾರೆ.