ಭಯೋತ್ಪಾದನೆಗೆ ಸಂಚು ಪ್ರಕರಣ: ದಕ್ಷಿಣ ಕಾಶ್ಮೀರದ 5 ಸ್ಥಳಗಳಲ್ಲಿ ಎನ್‌ಐಎ ದಾಳಿ

ಭಯೋತ್ಪಾದಕ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ದಕ್ಷಿಣ ಕಾಶ್ಮೀರದ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.
ಪುಲ್ವಾಮಾದಲ್ಲಿ ದಾಳಿ ನಡೆಸಿರುವ ಎನ್ಐಎ.
ಪುಲ್ವಾಮಾದಲ್ಲಿ ದಾಳಿ ನಡೆಸಿರುವ ಎನ್ಐಎ.

ನವದೆಹಲಿ: ಭಯೋತ್ಪಾದಕ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ದಕ್ಷಿಣ ಕಾಶ್ಮೀರದ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.

ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್‌ಗಳು, ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ) ಮತ್ತು ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಲು ಸಂಚು ರೂಪಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಎನ್ಐಎ ಪ್ರಕರಣದ ತನಿಖೆ ನಡೆಸಲು ಆರಂಭಿಸಿದೆ. ಪ್ರಕರಣ ಸಂಬಂಧ ಮೇ ತಿಂಗಳಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್, ಶೋಪಿಯಾನ್, ಪುಲ್ವಾಮಾ, ಶ್ರೀನಗರ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ 13 ಸ್ಥಳಗಳನ್ನು ಎನ್‌ಐಎ ಶೋಧಿಸಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡಲು ಸ್ಥಳೀಯ ಯುವಕರು ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈಜೋಡಿಸಿದ್ದು, ಸಂಚು ರೂಪಿಸುತ್ತಿವೆ ಎಂದು ಎನ್ಐಎ ಹೇಳಿತ್ತು.

ಇದಕ್ಕೂ ಮುನ್ನ, ಜೂನ್ 26 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಳೆದ ವರ್ಷ ಏಜೆನ್ಸಿ ದಾಖಲಿಸಿದ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com