ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್‌ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾಂಗ್ ಸ್ಚರ್ ಲಾರೆನ್ಸ್ ಬಿಷ್ಣೋಯಿ
ಗ್ಯಾಂಗ್ ಸ್ಚರ್ ಲಾರೆನ್ಸ್ ಬಿಷ್ಣೋಯಿ
Updated on

ರಾಯ್ಪುರ: ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಅವರ ಆರೋಗ್ಯ ಹದಗೆಟ್ಟ ನಂತರ ಬಿಷ್ಣೋಯ್ ನನ್ನು ಬಟಿಂಡಾ ಸೆಂಟ್ರಲ್ ಜೈಲಿನಿಂದ ಫರೀದ್ಕೋಟ್ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ತಿಳಿದುಬಂದಿದೆ. ಪೋಲೀಸರ ಮಾಹಿತಿಯ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಿಷ್ಣೋಯಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಜ್ವರ ತೀವ್ರವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಏತನ್ಮಧ್ಯೆ, ಲಾರೆನ್ಸ್ ಬಿಷ್ಣೋಯ್ ಸಿಂಡಿಕೇಟ್‌ ಅಥವಾ ಗ್ಯಾಂಗ್ ನ ಮೂವರು ಭೀಕರ ಶಾರ್ಪ್‌ಶೂಟರ್‌ಗಳನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂದು ದೆಹಲಿ ಪೊಲೀಸರ ವಿಶೇಷ ಘಟಕ ತಿಳಿಸಿದೆ. ಬಂಧಿತ ಆರೋಪಿಗಳನ್ನು ಉದಿತ್ ಶಾ (31), ಅನೀಶ್ ಕುಮಾರ್ (42), ಮತ್ತು ಮೋಹಿತ್ ಗುಪ್ತಾ (27) ಎಂದು ಗುರುತಿಸಲಾಗಿದೆ. ಅಂತೆಯೇ ಬಂಧಿತರಿಂದ ಎರಡು ಸಿಂಗಲ್-ಶಾಟ್ ಪಿಸ್ತೂಲ್ ಮತ್ತು ನಾಲ್ಕು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಶೇಷ ಸೆಲ್ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com