social_icon

ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ ಪ್ರಕರಣ: 5 PFI ಕಾರ್ಯಕರ್ತರು ದೋಷಿಗಳು ಎಂದ ಕೋರ್ಟ್

ಕೇರಳದ ಪ್ರೊಫೆಸರ್‌ ಜೊಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ PFI ಕಾರ್ಯಕರ್ತರ ವಿರುದ್ಧದ ಆರೋಪ ಸಾಬೀತಾಗಿದ್ದು, ಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.

Published: 12th July 2023 03:26 PM  |   Last Updated: 12th July 2023 03:26 PM   |  A+A-


Kerala prof Joseph

ಕೇರಳ ಪ್ರೊ. ಜೋಸೆಫ್

Posted By : Srinivasamurthy VN
Source : PTI

ಕೊಚ್ಚಿನ್: ಕೇರಳದ ಪ್ರೊಫೆಸರ್‌ ಜೊಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ PFI ಕಾರ್ಯಕರ್ತರ ವಿರುದ್ಧದ ಆರೋಪ ಸಾಬೀತಾಗಿದ್ದು, ಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.

ಕೊಚ್ಚಿಯಲ್ಲಿರುವ ರಾಷ್ಟ್ರೀಯ ತನಿಖಾ ದಳ (NIA) ಕೋರ್ಟ್‌ ಐವರನ್ನು ದೋಷಿಗಳೆಂದು ತೀರ್ಪು ನೀಡಿದ್ದು, ಉಳಿದ ಐವರು ಆರೋಪಿಗಳನ್ನು ಪ್ರಕರಣದಿಂದ ಖುಲಾಸೆ ಮಾಡಿದೆ. ಪ್ರಕರಣದ ಎರಡನೇ ಹಂತದ ವಿಚಾರಣೆಯಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಕೆ ಭಾಸ್ಕರ್ ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಕೊಲೆ ಯತ್ನ, ಪಿತೂರಿ ಮತ್ತು ಇತರ ವಿವಿಧ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು. ಅಂತೆಯೇ ಶಿಕ್ಷೆಯ ಪ್ರಮಾಣವನ್ನು ಮುಂದಿನ ವಿಚಾರಣೆಯಲ್ಲಿ ಘೋಷಿಸುವುದಾಗಿ ಕೋರ್ಟ್ ಹೇಳಿದೆ.

ಇದನ್ನೂ ಓದಿ: ಕೇರಳದಲ್ಲಿ ಸದ್ಯಕ್ಕಿಲ್ಲ ನಂದಿನಿ ಮಳಿಗೆ; ವಿಸ್ತರಣೆ ಯೋಜನೆ ಸ್ಥಗಿತಗೊಳಿಸಿದ ಕರ್ನಾಟಕ ಸರ್ಕಾರ!

ಮೊದಲ ಹಂತದಲ್ಲಿ, 31 ಆರೋಪಿಗಳು ವಿಚಾರಣೆಯನ್ನು ಎದುರಿಸಿದ್ದರು ಮತ್ತು ಅವರಲ್ಲಿ, ನ್ಯಾಯಾಲಯವು ಏಪ್ರಿಲ್ 2015 ರಲ್ಲಿ ಯುಎಪಿಎ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ 10 ಅಪರಾಧಗಳಿಗೆ ಶಿಕ್ಷೆ ವಿಧಿಸಿತು ಮತ್ತು ಅಪರಾಧಿಗಳಿಗೆ ಆಶ್ರಯ ನೀಡಿದ ಇತರ ಮೂವರು ತಪ್ಪಿತಸ್ಥರೆಂದು ತೀರ್ಪು ನೀಡಿತು. ಆಗ ಈ ಪ್ರಕರಣದಲ್ಲಿ 18 ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಜುಲೈ 4, 2010 ರಂದು ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿರುವ ನ್ಯೂಮನ್ ಕಾಲೇಜಿನ ಪ್ರೊಫೆಸರ್ ಟಿ ಜೆ ಜೋಸೆಫ್ ಅವರ ಬಲಗೈಯನ್ನು ಈಗ ಕಾನೂನುಬಾಹಿರವಾದ ಇಸ್ಲಾಮಿಕ್ ಸಂಘಟನೆಯಾದ ಪಿಎಫ್‌ಐ ಕಾರ್ಯಕರ್ತರು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೊದಲು ಮೊದಲ ಹಂತದ ವಿಚಾರಣೆ ನಡೆಸಿದಾಗ 13 ಮಂದಿ ಮೇಲಿದ್ದ ಆರೋಪ ಸಾಬೀತಾಗಿತ್ತು. 18 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿತು. ತೀರ್ಪಿನ ನಂತರ 11 ಮಂದಿಯ ವಿರುದ್ಧ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಆರೋಪಿಗಳೆಲ್ಲರೂ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (PFI) ಸದಸ್ಯರಾಗಿದ್ದರು.

ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 135 ವರ್ಷ ಜೈಲು ಶಿಕ್ಷೆ!

ಏನಿದು ಪ್ರಕರಣ?
ಕಾಲೇಜಿನಲ್ಲಿ ನಡೆದ ಆಂತರಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಪ್ರವಾದಿಯನ್ನು ಅವಮಾನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ 2010ರ ಜುಲೈ 4 ರಂದು ತೊಡುಪುಳದ ನ್ಯೂಮನ್ ಕಾಲೇಜಿನ ಪ್ರೊಫೆಸರ್‌ ಟಿಜೆ ಜೋಸೆಫ್‌ ( T J Joseph ) ಅವರ ಮೇಲೆ ದಾಳಿ ನಡೆದಿತ್ತು. ಶಸ್ತ್ರ ಸಜ್ಜಿತರಾಗಿಯೇ ಆಯುಧ ಮತ್ತು ಸ್ಫೋಟಕ ಸಾಮಗ್ರಿಗಳೊಂದಿಗೆ ಕಾರಿನಲ್ಲಿ ಬಂದಿದ್ದ ಪಿಎಫ್‌ಐ ಕಾರ್ಯಕರ್ತರು ಜೋಸೆಫ್‌ ಅವರ ಕಾರನ್ನು ತಡೆದು ನಿಲ್ಲಿಸಿದ್ದರು. ಬಳಿಕ ಕಾರಿನಿಂದ ಜೋಸೆಫ್‌ ಅವರನ್ನು ಹೊರಗಡೆ ಎಳೆದು ಕೊಡಲಿಯಿಂದ ಬಲಗೈಯನ್ನು ಕತ್ತರಿಸಿ ಹತ್ಯೆಗೆ ಯತ್ನಿಸಿ ಎಡಗೈಯನ್ನು ಕತ್ತರಿಸಿದ್ದರು. ಈ ಸಂದರ್ಭದಲ್ಲಿ ಜೋಸೆಫ್‌ ಅವರ ಸಹೋದರಿ ಕೃತ್ಯವನ್ನು ತಡೆಯಲು ಮುಂದಾದಾಗ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾರನ್ನು ಜಖಂಗೊಳಿಸಿ ಪರಾರಿಯಾಗಿದ್ದರು.
 


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp