ಉತ್ತರಾಖಂಡ: ನಮಾಮಿ ಗಂಗೆ ಯೋಜನೆ ವೇಳೆ ಭೀಕರ ದುರಂತ; ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು 15 ಮಂದಿ ಸಾವು

ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ
ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು 15 ಮಂದಿ ಸಾವು
ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು 15 ಮಂದಿ ಸಾವು
Updated on

ಡೆಹ್ರಾಡೂನ್:‌ ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಮರಣ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಮಾಮಿ ಗಂಗೆ ಯೋಜನೆಯಲ್ಲಿ ತೊಡಗಿದ್ದ ವೇಳೆ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡಿದೆ.  ಈ ವೇಳೆ ಮೂವರು ಪೊಲೀಸರು ಹಾಗೂ ಮೂವರು ಹೋಮ್ ಗಾರ್ಡ್ ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು ಅವರನ್ನು ಚಮೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲಕಾನಂದದ ನೀರಿನ ಮಟ್ಟ ಏರಿಕೆಯಾಗಿದೆ. ಅಲಕಾನಂದದ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೌರಿ ಜಿಲ್ಲೆಯ ಶ್ರೀನಗರದಲ್ಲಿರುವ ಜಿವಿಕೆ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನಿಂದ ಸುಮಾರು 3,000 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ದುರ್ಘಟನೆಯಲ್ಲಿ ಪಿಪಲ್ಕೋಟ್ ಹೊರಠಾಣಾ ಇನ್‌ಚಾರ್ಜ್ ಕೂಡ ಮೃತಪಟ್ಟಿದ್ದಾರೆ ಎಂದು ತಿಲಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com