social_icon

ವಿಪಕ್ಷಗಳು ಸದನದಲ್ಲಿ ಚರ್ಚೆಗಳು ನಡೆಯದಂತೆ ನೋಡಿಕೊಳ್ಳಲು ಹೊಸ ದಾರಿಗಳನ್ನು ಹುಡುಕುತ್ತಿವೆ: ಪ್ರಲ್ಲಾದ್ ಜೋಶಿ ಟೀಕೆ

ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

Published: 20th July 2023 01:57 PM  |   Last Updated: 20th July 2023 08:53 PM   |  A+A-


Before mansoon session begins

ಇಂದು ಅಧಿವೇಶನ ಆರಂಭಕ್ಕೆ ಮುನ್ನ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಜೊತೆ ಸಚಿವರುಗಳು

Posted By : Sumana Upadhyaya
Source : PTI

ನವದೆಹಲಿ: ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

ಮುಂಗಾರು ಅಧಿವೇಶನದಲ್ಲಿ ಎಲ್ಲ ವಿಷಯಗಳನ್ನು ಚರ್ಚಿಸಲು ಸಿದ್ಧ ಎಂದು ಸರ್ಕಾರ ಹೇಳಿದೆ. ಸಂಸತ್ತಿನ ಸುಗಮ ಕಲಾಪಕ್ಕೆ ಬೆಂಬಲ ನೀಡುವಂತೆ ನಾವು ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದೇವೆ ಎಂದು ಜೋಶಿ ಹೇಳಿದ್ದಾರೆ.

ನಿನ್ನೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರದ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಾಗಿದೆ, ಈಶಾನ್ಯ ರಾಜ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ನೋಡಲ್ ಸಚಿವಾಲಯವಾಗಿದೆ ಎಂದು ಸ್ಪಷ್ಟಪಡಿಸಿದರು.

ಮಣಿಪುರದಲ್ಲಿ ಮೇ 3 ರಂದು ನಡೆದ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ'ಯಿಂದ ಉಂಟಾದ ಜನಾಂಗೀಯ ಹಿಂಸಾಚಾರದಲ್ಲಿ 150 ಕ್ಕೂ ಹೆಚ್ಚು ಜೀವಗಳು ಬಲಿಯಾದ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಇದನ್ನೂ ಓದಿ: 'ನನ್ನ ಹೃದಯ ನೋವು ತುಂಬಿ ಸಿಟ್ಟಿನಿಂದ ಕುದಿಯುತ್ತಿದೆ, ತಪ್ಪಿತಸ್ಥರನ್ನು ಬಿಡುವುದಿಲ್ಲ': ಮಣಿಪುರ ಮಹಿಳೆಯರ ಬೆತ್ತಲೆ ಪರೇಡ್ ಬಗ್ಗೆ ಪ್ರಧಾನಿ ಆಕ್ರೋಶ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ನಿನ್ನೆ ಜೋಶಿ ಮಾತನಾಡಿ, ಮಣಿಪುರದ ಕುರಿತು ಚರ್ಚೆಗೆ ಎಲ್ಲಾ ಪಕ್ಷಗಳು ಒತ್ತಾಯಿಸುತ್ತಿವೆ. ಸರ್ಕಾರ ಚರ್ಚೆಗೆ ಒಪ್ಪಿಗೆ ನೀಡಿದ ನಂತರ ಪ್ರಧಾನಿ ಈ ಕುರಿತು ಹೇಳಿಕೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಲು ನೋಡುವಂತಿದೆ ಎಂದು ಟೀಕಿಸಿದರು.

ಸದನದಲ್ಲಿ ಚರ್ಚೆಗೆ ಅವಕಾಶ ನೀಡದಿರಲು ಪ್ರತಿಪಕ್ಷಗಳು ಹೊಸ ಕಾರಣಗಳನ್ನು ಹುಡುಕುತ್ತಿವೆ. ಪ್ರತಿಪಕ್ಷಗಳ ಬೇಡಿಕೆಯ ಮೇರೆಗೆ ಮಣಿಪುರದ ಬಗ್ಗೆ ಚರ್ಚಿಸಲು ಸರ್ಕಾರ ಒಪ್ಪಿಕೊಂಡಿತು. ಈಗ ಅವರು ಈ ವಿಷಯದ ಬಗ್ಗೆ ಪ್ರಧಾನಿ ಹೇಳಿಕೆಯನ್ನು ಬಯಸುತ್ತಾರೆ. ಈ ಮಂದಿ ಹೊಸ ಹೊಸ ನೆಪಗಳನ್ನು ಮುಂದಿಟ್ಟುಕೊಂಡು ಸದನ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದರು.


Stay up to date on all the latest ದೇಶ news
Poll
Rahul Dravid

ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಯ ಕಾಂಟ್ರ್ಯಾಕ್ಟ್ ವಿಸ್ತರಿಸುವ ಬಿಸಿಸಿಐ ನಿರ್ಧಾರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp