ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ; ಕೇಂದ್ರದ Z+ ಭದ್ರತೆಯನ್ನು ನಿರಾಕರಿಸಿದ ಪಂಜಾಬ್ ಮುಖ್ಯಮಂತ್ರಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರತಾ ತಂಡವು ಕೇಂದ್ರ ಭದ್ರತಾ ಪಡೆಯನ್ನು ನಿಯೋಜಿಸುವ ಮೂಲಕ ಕೇಂದ್ರವು ಅವರಿಗೆ ನೀಡಿದ್ದ Z+ ಭದ್ರತೆಯನ್ನು ನಿರಾಕರಿಸಿದೆ. ಎಎಪಿ ನಾಯಕನಿಗೆ ರಾಜ್ಯದ ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಭಗವಂತ್ ಮಾನ್
ಭಗವಂತ್ ಮಾನ್

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರತಾ ತಂಡವು ಕೇಂದ್ರ ಭದ್ರತಾ ಪಡೆಯನ್ನು ನಿಯೋಜಿಸುವ ಮೂಲಕ ಕೇಂದ್ರವು ಅವರಿಗೆ ನೀಡಿದ್ದ Z+ ಭದ್ರತೆಯನ್ನು ನಿರಾಕರಿಸಿದೆ. ಎಎಪಿ ನಾಯಕನಿಗೆ ರಾಜ್ಯದ ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವ ಮುಖ್ಯಮಂತ್ರಿ ಕಚೇರಿಯು, ಪಂಜಾಬ್ ಮತ್ತು ದೆಹಲಿಯಲ್ಲಿ ಭದ್ರತೆಯನ್ನು ಸ್ವೀಕರಿಸಲು ನಿರಾಕರಿಸಿದೆ. ಪಂಜಾಬ್ ಪೊಲೀಸ್ ವಿಶೇಷ ತಂಡವು ಈ ಎರಡೂ ಸ್ಥಳಗಳಲ್ಲಿ ಅವರನ್ನು ರಕ್ಷಿಸುತ್ತದೆ ಎಂದು ಹೇಳಿದೆ.

'ಪಂಜಾಬ್ ಮತ್ತು ದೆಹಲಿಯಲ್ಲಿ ಮುಖ್ಯಮಂತ್ರಿಗೆ ಕೇಂದ್ರ ಭದ್ರತಾ ಏಜೆನ್ಸಿಯಿಂದ ರಕ್ಷಣೆ ನೀಡಿದರೆ, ಇದು ಪಂಜಾಬ್ ಪೊಲೀಸರ ಮೇಲೆ ಅವರಿಗೆ ವಿಶ್ವಾಸವಿಲ್ಲ ಎಂಬ ಸಂದೇಶವನ್ನು ನೀಡುತ್ತದೆ. ಹೀಗಾಗಿ, ತನ್ನದೇ ಪೊಲೀಸರ ಮೇಲೆ ತಮಗೆ ವಿಶ್ವಾಸವಿಲ್ಲ ಎಂಬ ಸಂದೇಶವನ್ನು ರವಾನಿಸಲು ಅವರು ಬಯಸುವುದಿಲ್ಲ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜಿಸಲಾಗಿತ್ತು. ಇದಾದ ಕೆಲವು ದಿನಗಳ ನಂತರ Z ಪ್ಲಸ್ ಭದ್ರತೆಯನ್ನು ತೆಗೆದುಕೊಳ್ಳದಿರಲು ಮುಖ್ಯಮಂತ್ರಿ ಮಾನ್ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿಗೆ ದೇಶ ಮತ್ತು ವಿದೇಶಗಳಲ್ಲಿ ಬೆದರಿಕೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು Z+ ಭದ್ರತೆಯನ್ನು ನೀಡಲಾಯಿತು. ಅವರಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ವಿಐಪಿ ರಕ್ಷಣಾ ದಳವನ್ನು ಒದಗಿಸಬೇಕಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com