ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಹಳಿತಪ್ಪಿದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ.
ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಹಳಿತಪ್ಪಿದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ.

ಒಡಿಶಾ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಪೂರ್ಣ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ ಮತ್ತು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕೋಲ್ಕತ್ತ: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ ಮತ್ತು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ನಡೆದ ರೈಲ್ವೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿದೆ. ಇನ್ನೂ 650 ಗಾಯಗೊಂಡ ಪ್ರಯಾಣಿಕರು ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್‌ಇಆರ್ ರೈಲ್ವೆ ವಕ್ತಾರ ಆದಿತ್ಯ ಚೌಧರಿ ಹೇಳಿದ್ದಾರೆ.

ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ (ಸಿಆರ್‌ಎಸ್) ಆಯುಕ್ತರಿಂದ ಅಪಘಾತದ ವಿಚಾರಣೆ ನಡೆಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದೇಶದಲ್ಲೇ ಅತ್ಯಂತ ಭೀಕರ ರೈಲು ಅಪಘಾತ ಇದಾಗಿದ್ದು, ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ಇರುವ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ರೈಲ್ವೆ ಸಚಿವಾಲಯ ಈಗಾಗಲೇ ಘಟನೆಯ ತನಿಖೆಗೆ ಆದೇಶಿಸಿದೆ.

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತದಲ್ಲಿ ಸಿಲುಕಿವೆ.

Related Stories

No stories found.

Advertisement

X
Kannada Prabha
www.kannadaprabha.com