social_icon

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 275; ಕೇಂದ್ರ ಸರ್ಕಾರ ಮಾಹಿತಿ

ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡಿದ್ದು, ಸಾವಿನ ಸಂಖ್ಯೆ 275 ಎಂದು ಮಾಹಿತಿ ತಿಳಿಸಿದೆ.

Published: 04th June 2023 10:25 PM  |   Last Updated: 05th June 2023 07:09 PM   |  A+A-


Odisha_Train_Accident1

ಒಡಿಶಾ ರೈಲು ದುರಂತದ ಚಿತ್ರ

Posted By : Srinivasamurthy VN
Source : PTI

ಭುವನೇಶ್ವರ: ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡಿದ್ದು, ಸಾವಿನ ಸಂಖ್ಯೆ 275 ಎಂದು ಮಾಹಿತಿ ತಿಳಿಸಿದೆ.

ಬಾಲಸೋರ್‌ನಲ್ಲಿ ನಡೆದ ದುರಂತ ರೈಲು ಅಪಘಾತ ಸಂಭವಿಸಿದ 2 ದಿನಗಳ ನಂತರ, ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಭಾನುವಾರ, ಸಾವಿನ ಸಂಖ್ಯೆ ಕುರಿತಂತೆ ಮಾಹಿತಿ ನೀಡಿದ್ದಾರೆ. ಮೃತ ದೇಹಗಳ ಎಣಿಕೆ ವೇಳೆ ಕೆಲವು ದೇಹಗಳನ್ನು ಎರಡೆರಡು ಬಾರಿ ಎಣಿಸಲಾಗಿದೆ. ಇದೀಗ ಇಂತಹ  'ಡಬಲ್ ಎಣಿಕೆ'ಗಳನ್ನು ಅಂಶೀಕರಿಸಿದ ನಂತರ ಘಟನೆಯಲ್ಲಿ ಸಾವಿನ ಸಂಖ್ಯೆಯನ್ನು 275ಕ್ಕೆ ಪರಿಷ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಡಿಶಾ ರೈಲು ಅಪಘಾತ: ಟಿಕೆಟ್ ರಹಿತ ಪ್ರಯಾಣಿಕರಿಗೂ ಪರಿಹಾರ

ಈ ಹಿಂದೆ ಸಾವಿನ ಸಂಖ್ಯೆ 288 ಎಂದು ಹೇಳಲಾಗಿತ್ತು. ಇದೀಗ ಈ ಸಂಖ್ಯೆಯನ್ನು 275ಕ್ಕೆ ಪರಿಷ್ಕರಣೆ ಮಾಡಲಾಗಿದೆ. 275ರಲ್ಲಿ 88 ಮೃತದೇಹಗಳನ್ನು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಈ ಕುರಿತು ಮಾತನಾಡಿದ ಪ್ರದೀಪ್ ಜೆನಾ, "ಸಾವಿನ ಸಂಖ್ಯೆ 288 ಎಂದು ಶನಿವಾರ ರೈಲ್ವೇ ಹೇಳಿದೆ ಮತ್ತು ನಾವು ಅದನ್ನು ಪ್ರಸಾರ ಮಾಡಿದ್ದೇವೆ. ಆದರೆ, ಅಂದಿನಿಂದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಅವರ ತಂಡವು ಪ್ರತಿ ದೇಹವನ್ನು ಟ್ರ್ಯಾಕ್‌ನಿಂದ, ಆಸ್ಪತ್ರೆ ಮತ್ತು ಎರಡು ತಾತ್ಕಾಲಿಕ ಅಸೆಂಬ್ಲಿ ಪಾಯಿಂಟ್‌ಗಳಲ್ಲಿ ಪರಿಶೀಲಿಸಿದೆ. ಈ ವೇಳೆ ಕೆಲವು ದೇಹಗಳನ್ನು ಎರಡು ಬಾರಿ ಎಣಿಕೆ ಮಾಡಿರುವುದು ಕಂಡುಬಂದಿದೆ. ಆದ್ದರಿಂದ ಮತ್ತೆ ಎಣಿಕೆ ಕಾರ್ಯ ಮಾಡಲಾಗಿದ್ದು, ಸಾವಿನ ಸಂಖ್ಯೆ 275 ಮತ್ತು 288 ಅಲ್ಲ 275 ಎಂಬುದು ಸ್ಪಷ್ಟವಾಗಿದೆ ಎಂದರು.

ಇದನ್ನೂ ಓದಿ: ರೈಲು ಅಪಘಾತದಲ್ಲಿ 1000 ಜನರು ಗಾಯಗೊಂಡಿದ್ದು, 100ಕ್ಕೂ ಹೆಚ್ಚು ರೋಗಿಗಳಿಗೆ ಐಸಿಯುವಿನಲ್ಲಿ ಚಿಕಿತ್ಸೆಯ ಅಗತ್ಯವಿದೆ: ಕೇಂದ್ರ ಆರೋಗ್ಯ ಸಚಿವ

ಅಂತೆಯೇ ಭಾನುವಾರ ಬೆಳಗಿನ ಜಾವದವರೆಗೆ 78 ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. 10 ಮೃತದೇಹಗಳನ್ನು ಗುರುತಿಸಲಾಗಿದ್ದು, ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ. ಉಳಿದ ದೇಹಗಳ ಪೈಕಿ 170 ಶವಗಳನ್ನು ಭುವನೇಶ್ವರಕ್ಕೆ ಶವಾಗಾರಗಳು ಮತ್ತು ಇತರ ಆಸ್ಪತ್ರೆಗಳಾದ ಏಮ್ಸ್, ಕ್ಯಾಪಿಟಲ್ ಆಸ್ಪತ್ರೆ, ಎಸ್‌ಯುಎಂ, ಕೆಐಎಂ ಮತ್ತು ಎಎಂಆರ್‌ಐ ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ಉಳಿದ ದೇಹಗಳನ್ನು ಸಹ ಅಲ್ಲಿಗೆ ಕಳುಹಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ 1,175 ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಭಾನುವಾರ ಬೆಳಿಗ್ಗೆ ತನಕ, ಆಸ್ಪತ್ಪೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 793 ಗಾಯಗೊಂಡ ಪ್ರಯಾಣಿಕರನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ, 382 ಮಂದಿಯ ಚಿಕಿತ್ಸೆ ಮುಂದುವರೆದಿದೆ. ಈ ಅಂಕಿಅಂಶವನ್ನು ಮತ್ತೊಮ್ಮೆ ನವೀಕರಿಸಲಾಗುತ್ತದೆ. ಗುರುತಿಸದ ಶವಗಳ ಬಗ್ಗೆ, ನಾವು ಶವಗಳ ಛಾಯಾಚಿತ್ರಗಳನ್ನು ಹಾಕಿದ್ದೇವೆ ಮತ್ತು ಅವುಗಳನ್ನು ಮೂರು ಸಂಸ್ಥೆಗಳ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ್ದೇವೆ ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
 


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp