social_icon

ಒಡಿಶಾ ರೈಲು ದುರಂತ: ಎಲ್ಲರಿಗಿಂತ ಮೊದಲು ಸ್ಪಂದಿಸಿ 200 ಜನರ ಪ್ರಾಣ ಉಳಿಸಿದ ಆದಿವಾಸಿಗಳು!

ಫೂಲಮಣಿ ಹೆಂಬ್ರುಮ್ ತನ್ನ ಮನೆಯ ಅಂಗಳದಲ್ಲಿ ಅಡುಗೆ ಮಾಡುತ್ತಿದ್ದಾಗ ಕಳೆದ ಶುಕ್ರವಾರ ಸಂಜೆ ಒಂದು ದೊಡ್ಡ ಶಬ್ದ ಕೇಳಿಸಿತು. ತಕ್ಷಣ ಫೂಲಮಣಿ ಮತ್ತು ಅವಳ ಪತಿ ರಘು ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ರೈಲ್ವೆ ಹಳಿಗಳತ್ತ...

Published: 05th June 2023 04:07 PM  |   Last Updated: 05th June 2023 09:03 PM   |  A+A-


Rescue operations at the Balasore train crash site

ಕಳೆದ ಶುಕ್ರವಾರ ಅಪಘಾತ ಸಂಭವಿಸಿದ ನಂತರದ ದೃಶ್ಯ

Posted By : Lingaraj Badiger
Source : The New Indian Express

ಬಹನಾಗ: ಫೂಲಮಣಿ ಹೆಂಬ್ರುಮ್ ತನ್ನ ಮನೆಯ ಅಂಗಳದಲ್ಲಿ ಅಡುಗೆ ಮಾಡುತ್ತಿದ್ದಾಗ ಕಳೆದ ಶುಕ್ರವಾರ ಸಂಜೆ ಒಂದು ದೊಡ್ಡ ಶಬ್ದ ಕೇಳಿಸಿತು. ತಕ್ಷಣ ಫೂಲಮಣಿ ಮತ್ತು ಅವಳ ಪತಿ ರಘು ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ರೈಲ್ವೆ ಹಳಿಗಳತ್ತ ಹೋಗಿ ನೋಡಿದರೆ ಭೀಕರ ರೈಲು ಅಪಘಾತ ಸಂಭವಿಸಿತ್ತು.

"ನನ್ನ ಜೀವನದಲ್ಲಿ ಮೊದಲ ಬಾರಿಗೆ, ನಾನು ಅನೇಕ ಸತ್ತ ಜನರನ್ನು ನೋಡಿದೆ. ದೇಹಗಳು ರಕ್ತದಲ್ಲಿ ಮುಳುಗಿದ್ದವು. ಛಿದ್ರಗೊಂಡ ದೇಹದ ಭಾಗಗಳು ಅಲ್ಲಲ್ಲಿ ಹರಡಿಕೊಂಡಿದ್ದವು. ನಾನು ಧೈರ್ಯ ಮಾಡಿ ಹಳಿತಪ್ಪಿದ ಕೋಚ್ ಕಡೆಗೆ ಓಡಿದೆ. ಅಲ್ಲಿ ಚಿಕ್ಕ ಹುಡುಗಿ ಕಿಟಕಿಯಿಂದ ನೇತಾಡುತ್ತಿದ್ದಳು. ಆಕೆಯ ದೇಹದಾದ್ಯಂತ ಗಾಯಗಳಾಗಿದ್ದವು. ಆಕೆಯ ತಾಯಿ ಹೊರಬರುವಲ್ಲಿ ಯಶಸ್ವಿಯಾದರು. ನಾನು ಅವರನ್ನು ನನ್ನ ಮನೆಗೆ ಕರೆದೊಯ್ದು ನೀರು ಕೊಟ್ಟೆ” ಎಂದು ಆರು ಮಕ್ಕಳನ್ನು ರಕ್ಷಿಸಿದ 30 ವರ್ಷದ ಬುಡಕಟ್ಟು ಮಹಿಳೆ ಹೇಳಿದ್ದಾರೆ.

ಹೆಂಬ್ರೂಮ್ ದಂಪತಿಗಳ ಸಹಾಯ ಅಲ್ಲಿಗೆ ನಿಲ್ಲಲಿಲ್ಲ. ಅವರು ಇನ್ನೂ 30 ಪ್ರಯಾಣಿಕರನ್ನು ರಕ್ಷಿಸಲು ಹೋದರು ಮತ್ತು ಆಸ್ಪತ್ರೆಗಳಿಗೆ ದಾಖಲಿಸಲು ಸಾರಿಗೆ ವ್ಯವಸ್ಥೆ ಮಾಡಿದರು. ರಕ್ಷಣಾ ತಂಡಗಳು ಆಗಮಿಸುವ ಮೊದಲು, ಕೃಷ್ಣಾಪುರ ಮತ್ತು ಕಮರಿಪುರದ ಎರಡು ಕುಗ್ರಾಮಗಳ ಸುಮಾರು 58 ಬುಡಕಟ್ಟು ಜನಾಂಗದವರು ತಮ್ಮಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಬಹನಾಗದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಿಲುಕಿದ ಸುಮಾರು 200 ಪ್ರಯಾಣಿಕರ ಜೀವ ಉಳಿಸಿದ್ದಾರೆ.

ಇದನ್ನು ಓದಿ: 'ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಪತ್ತೆ ಹಚ್ಚುವುದು ಮುಖ್ಯವಾಗಿದೆ': ರೈಲ್ವೆ ಸಚಿವ ಅಶ್ವಿನ್ ವೈಷ್ಣವ್

ಆದಿವಾಸಿಗಳು ಸುಮಾರು 200 ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿದ್ದಾರೆ ಮತ್ತು ಹಾನಿಗೊಳಗಾದ ಬೋಗಿಗಳಿಂದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ನಂತರ ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ, ಅಗ್ನಿಶಾಮಕ ಸೇವೆಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ಆಗಮಿಸಿದವು ಎಂದು ಮತ್ತೊಬ್ಬ ಬುಡಕಟ್ಟು ಜನಾಂಗದ ಮಹೇಶ್ವರ್ ಕಿಸ್ಕು ನೆನಪಿಸಿಕೊಂಡಿದ್ದಾರೆ.

“ನಾನು ಉರುಳಿಬಿದ್ದ ಕೋಚ್‌ಗಳ ಮೇಲೆ ಹತ್ತಿ ಕೈ ಮತ್ತು ಕಾಲುಗಳನ್ನು ಕಳೆದುಕೊಂಡಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದೇನೆ. ಆ ದೃಶ್ಯ ತುಂಬಾ ಭಯಾನಕವಾಗಿತ್ತು. ಘಟನೆ ನಡೆದು ಎರಡು ದಿನಗಳಾದರೂ ಅದು ನನ್ನ ಕಣ್ಣು ಮುಂದೆ ಬರುತ್ತಿದೆ” ಎಂದು ಅವರು ಹೇಳಿದ್ದಾರೆ.

ಬುಡಕಟ್ಟು ಕುಟುಂಬಗಳು ರೈಲು ಹಳಿತಪ್ಪಿದ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲಿ ವಾಸಿಸುತ್ತಿವೆ. ಅದೃಷ್ಟವಶಾತ್ ಅವರ ಮನೆಗಳಿಗೆ ರೈಲು ಅಪ್ಪಳಿಸಿಲ್ಲ. ನಾವು ಅದೃಷ್ಟವಂತರು ಎಂದು ಅವರ ಪತ್ನಿ ಮಂಜುಲತಾ ತಿಳಿಸಿದ್ದಾರೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp