ಮಣಿಪುರ ಹಿಂಸಾಚಾರ: ಬಿಎಸ್‌ಎಫ್ ಯೋಧನಿಗೆ ಗುಂಡೇಟು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿಗೆ ಗಾಯ

ಮಣಿಪುರದ ಸೆರೌ ಪ್ರದೇಶದಲ್ಲಿ ಓರ್ವ ಬಿಎಸ್‌ಎಫ್ ಯೋಧನ ಹತ್ಯೆಯಾಗಿದ್ದು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಇಂಫಾಲ್: ಮಣಿಪುರದ ಸೆರೌ ಪ್ರದೇಶದಲ್ಲಿ ಓರ್ವ ಬಿಎಸ್‌ಎಫ್ ಯೋಧನ ಹತ್ಯೆಯಾಗಿದ್ದು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.

ಗಾಯಾಳುಗಳನ್ನು ಮಂತ್ರಿಪುಖ್ರಿಗೆ ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ ಮತ್ತು ಶೋಧ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ದಿಮಾಪುರ್‌ನಲ್ಲಿರುವ ಸೇನೆಯ ಸ್ಪಿಯರ್‌ಕಾರ್ಪ್ಸ್ ಪ್ರಧಾನ ಕಚೇರಿ ಟ್ವಿಟರ್‌ನಲ್ಲಿ ತಿಳಿಸಿದೆ.

ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅದು ಹೇಳಿದೆ.

ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದ ಸುಗ್ನು/ಸೆರೌ ಪ್ರದೇಶಗಳಲ್ಲಿ ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ಪೋಲಿಸ್‌ನಿಂದ ವ್ಯಾಪಕವಾದ ಕಾರ್ಯಾಚರಣೆಯನ್ನು ಕೈಗೊಂಡಿದ್ದವು.

ಜೂನ್ 05/06 ರ ರಾತ್ರಿಯಿಡೀ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವೆ ಮಧ್ಯಂತರ ಗುಂಡಿನ ದಾಳಿ ನಡೆಯಿತು. ಭದ್ರತಾ ಪಡೆಗಳು ದಾಳಿಯ ಪರಿಣಾಮವಾಗಿ ಪ್ರತಿದಾಳಿ ನಡೆಸಿವೆ ಎಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com