social_icon

ಒಡಿಶಾ ತ್ರಿವಳಿ ರೈಲು ಅಪಘಾತದ ಹಿಂದೆ ಟಿಎಂಸಿ ಪಿತೂರಿ: ಮಮತಾ ವಿರುದ್ಧ ಸುವೆಂದು ಅಧಿಕಾರಿ ಕಿಡಿ

ಕನಿಷ್ಠ 275 ಜನರು ಸಾವನ್ನಪ್ಪಿದ ಒಡಿಶಾ ರೈಲು ಅಪಘಾತದ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸೋಮವಾರ ಆರೋಪಿಸಿದ್ದಾರೆ.

Published: 06th June 2023 01:17 PM  |   Last Updated: 06th June 2023 07:51 PM   |  A+A-


Mamata Banerjee, (R), and BJP’s Suvendu Adhikari.

ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ

Posted By : Shilpa D
Source : ANI

ಕೊಲ್ಕೋತಾ: ಕನಿಷ್ಠ 275 ಜನರು ಸಾವನ್ನಪ್ಪಿದ ಒಡಿಶಾ ರೈಲು ಅಪಘಾತದ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸೋಮವಾರ ಆರೋಪಿಸಿದ್ದಾರೆ.

ಜೂನ್ 2 ರಂದು ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಹಳಿಗಳಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ನಡುವೆ ಅಪಘಾತ ನಡೆದಿತ್ತು.

ಒಡಿಶಾ ರೈಲು ದುರಂತದ ಹಿಂದೆ ಟಿಎಂಸಿಯ ಪಿತೂರಿ ಇದೆ. ಘಟನೆ ಬೇರೆ ರಾಜ್ಯದಲ್ಲಾಗಿದ್ದರು ಅವರು (ಮಮತಾ ಬ್ಯಾನರ್ಜಿ) ನಿನ್ನೆಯಿಂದ ಏಕೆ ಗಾಬರಿಗೊಂಡಿದ್ದಾರೆ. ಸಿಬಿಐ ತನಿಖೆಗೆ ಅವರೇಕೆ ಹೆದರುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರೈಲು ಅಪಘಾತ ಪ್ರಕರಣ: ಮೊದಲು ಸಿಗ್ನಲ್ ನೀಡಿ ಆ ಬಳಿಕ ತೆಗೆಯಲಾಗಿತ್ತು: ಪ್ರಾಥಮಿಕ ವರದಿ 

ಟಿಎಂಸಿ ಪಕ್ಷದವರು ಪೊಲೀಸರ ನೆರವಿನೊಂದಿಗೆ ರೈಲ್ವೆ ಅಧಿಕಾರಿಗಳಿಬ್ಬರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಇಬ್ಬರು ರೈಲ್ವೆ ಅಧಿಕಾರಿಗಳ ನಡುವಿನ ಸಂಭಾಷಣೆ ಇವರಿಗೆ ಹೇಗೆ ಗೊತ್ತಾಯಿತು? ಸಂಭಾಷಣೆ ಹೇಗೆ ಸೋರಿಕೆಯಾಯಿತು ಎಂಬುದು ಸಿಬಿಐ ತನಿಖೆಯಿಂದ ಹೊರಬರಬೇಕಿದೆ. ಸತ್ಯಾಂಶ ತಿಳಿಯದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇನೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮುಖ್ಯಾಂಶಗಳ ನಿರ್ವಹಣೆ: ಒಡಿಶಾ ರೈಲು ಅಪಘಾತದ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು; ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಇದಕ್ಕೂ ಮುನ್ನ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವ ರೈಲ್ವೆ ಮಂಡಳಿಯ ನಿರ್ಧಾರವನ್ನು ಟೀಕಿಸಿದ್ದರು. ನಾನು ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ಪ್ರಕರಣವನ್ನು ಸಿಬಿಐಗೆ ನೀಡಿದ್ದೇನೆ ಆದರೆ ಇದುವರೆಗೆ ಯಾವುದೇ ಫಲಿತಾಂಶ ಬಂದಿಲ್ಲ. 12 ವರ್ಷ ಕಳೆದರೂ ಯಾವುದೇ ಫಲಿತಾಂಶ ಕಾಣುತ್ತಿಲ್ಲ ಎಂದಿದ್ದರು.

ಇನ್ನೂ ಬಾಲೇಶ್ವರ್‌ನಲ್ಲಿ ಸಂಭವಿಸಿದ ರೈಲು ದುರಂತ ಕುರಿತಂತೆ ಸಿಬಿಐ ಸೋಮವಾರ ತನಿಖೆ ಆರಂಭಿಸಿದೆ. 10 ಸದಸ್ಯರ ತಂಡ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಿತು ಎಂದು ರೈಲ್ವೆ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp