ಆಹ್ವಾನ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್ ನಿವಾಸಕ್ಕೆ ಭಜರಂಗ್​ ಪೂನಿಯಾ, ಸಾಕ್ಷಿ ಮಲ್ಲಿಕ್​ ಭೇಟಿ

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್​ಐ)ದ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್​ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.
ಅನುರಾಗ್ ಠಾಕೂರ್ ನಿವಾಸಕ್ಕೆ ತೆರಳುತ್ತಿರುವ ಕುಸ್ತಿಪಟುಗಳು.
ಅನುರಾಗ್ ಠಾಕೂರ್ ನಿವಾಸಕ್ಕೆ ತೆರಳುತ್ತಿರುವ ಕುಸ್ತಿಪಟುಗಳು.
Updated on

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್​ಐ)ದ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್​ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.

ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದ ಅನುರಾಗ್ ಠಾಕೂರ್ ಅವರು, ಮಾತುಕತೆಗೆ ಕುಸ್ತಿಪಟುಗಳಿಗೆ ಆಹ್ವಾನ ನೀಡಿದ್ದರು.

ಆಹ್ವಾನ ಬೆನ್ನಲ್ಲೇ ಇದೀಗ ಭಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್​ ಅವರು, ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕಳೆದ ಶನಿವಾರ ಕುಸ್ತಿಪಟುಗಳು ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿ ಮಾಡಿ ಬ್ರಿಜ್​ ಭೂಷಣ್​ ಲೈಂಗಿಕ ದೌರ್ಜನ್ಯದ ವಿರುದ್ಧ ಚರ್ಚಿಸಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಭಜರಂಗ್​ ಪೂನಿಯಾ ಅವರು, ನಮ್ಮ ಪ್ರತಿಭಟನಾ ಚಳುವಳಿಯು ಇನ್ನೂ ನಿಂತಿಲ್ಲ. ಅದು ಮುಂದುವರಿದಿದೆ. ಅದನ್ನು ಹೇಗೆ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಬೇಕೆಂದು ಚರ್ಚಿಸುತ್ತಿದ್ದೇವೆ. ಬ್ರಿಜ್​ ಸಿಂಗ್​ ವಿರುದ್ಧದ ತನಿಖೆಯು ಪ್ರಗತಿಯಲ್ಲಿದೆ ಎಂದು ಅಮಿತ್​ ಶಾ ಅವರು ಹೇಳಿದ್ದಾರೆ. ಸರ್ಕಾರದ ಪ್ರತಿಕ್ರಿಯೆಯು ನಮಗೆ ತೃಪ್ತಿದಾಯಕವಾಗಿಲ್ಲ ಮತ್ತು ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com