ಭವಿಷ್ಯದಲ್ಲಿ ತಮಿಳು ಪ್ರಧಾನಿ ಸೊಲ್ಲೆತ್ತಿದ್ದ ಅಮಿತ್ ಶಾ!

ಭವಿಷ್ಯದಲ್ಲಿ ತಮಿಳರನ್ನು ಪ್ರಧಾನಿಯನ್ನಾಗಿ ಮಾಡಲು ಕೇಂದ್ರ ಗೃಹ ಸಚಿವರು ಆಗಿರುವ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಭಾನುವಾರ ಸೊಲ್ಲೆತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಮಿತ್ ಶಾ
ಅಮಿತ್ ಶಾ

ಚೆನ್ನೈ:  ಭವಿಷ್ಯದಲ್ಲಿ ತಮಿಳರನ್ನು ಪ್ರಧಾನಿಯನ್ನಾಗಿ ಮಾಡಲು ಕೇಂದ್ರ ಗೃಹ ಸಚಿವರು ಆಗಿರುವ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಸೊಲ್ಲೆತ್ತಿದ್ದಾರೆ ಎಂದು ಪಕ್ಷದ ಮೂಲಗಳು ಭಾನುವಾರ ತಿಳಿಸಿವೆ.

ಚೆನ್ನೈಗೆ ಭೇಟಿ ನೀಡಿದ ವೇಳೆಯಲ್ಲಿ ತಮಿಳುನಾಡಿನ ಬಿಜೆಪಿ ಪದಾಧಿಕಾರಿಗಳೊಂದಿಗೆ ನಡೆಸಿದ ರಹಸ್ಯ ಸಭೆಯಲ್ಲಿ ಈ ರೀತಿಯ ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರು ಈ ರೀತಿಯ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ವಿವರಗಳು ಬಹಿರಂಗವಾಗಿಲ್ಲ. ಮುಂದಿನ ದಿನಗಳಲ್ಲಿ ತಮಿಳು ಪ್ರಧಾನಿ ಆಯ್ಕೆ ಕುರಿತಂತೆ ಅಮಿತ್ ಶಾ ಮಾತನಾಡಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಈ ಹಿಂದೆ ಎರಡು ಬಾರಿ ಇಂತಹ ಅವಕಾಶ ಕೈತಪ್ಪಿ ಹೋಗಿದೆ ಎಂದು ಅವರು ಹೇಳಿಕೆ ನೀಡಿದ್ದು, ಇದಕ್ಕೆ ಆಡಳಿತಾರೂಢ ಡಿಎಂಕೆಯನ್ನು ದೂಷಿಸಿದ್ದಾರೆ ಎನ್ನಲಾಗಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮತ್ತು ಈ ಉದ್ದೇಶಕ್ಕಾಗಿ ಬೂತ್ ಸಮಿತಿ ಬಲಪಡಿಸಲು ಬಿಜೆಪಿ ಪದಾಧಿಕಾರಿಗಳಿಗೆ ಷಾ ಪ್ರೋತ್ಸಾಹಿಸಿದ್ದಾರೆ ಎಂದು ಮೂಲಗಳು ವಿವರಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com