ಚೆನ್ನೈ: ಭವಿಷ್ಯದಲ್ಲಿ ತಮಿಳರನ್ನು ಪ್ರಧಾನಿಯನ್ನಾಗಿ ಮಾಡಲು ಕೇಂದ್ರ ಗೃಹ ಸಚಿವರು ಆಗಿರುವ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಸೊಲ್ಲೆತ್ತಿದ್ದಾರೆ ಎಂದು ಪಕ್ಷದ ಮೂಲಗಳು ಭಾನುವಾರ ತಿಳಿಸಿವೆ.
ಚೆನ್ನೈಗೆ ಭೇಟಿ ನೀಡಿದ ವೇಳೆಯಲ್ಲಿ ತಮಿಳುನಾಡಿನ ಬಿಜೆಪಿ ಪದಾಧಿಕಾರಿಗಳೊಂದಿಗೆ ನಡೆಸಿದ ರಹಸ್ಯ ಸಭೆಯಲ್ಲಿ ಈ ರೀತಿಯ ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರು ಈ ರೀತಿಯ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ವಿವರಗಳು ಬಹಿರಂಗವಾಗಿಲ್ಲ. ಮುಂದಿನ ದಿನಗಳಲ್ಲಿ ತಮಿಳು ಪ್ರಧಾನಿ ಆಯ್ಕೆ ಕುರಿತಂತೆ ಅಮಿತ್ ಶಾ ಮಾತನಾಡಿದ್ದಾರೆ ಎಂದು ಮೂಲಗಳು ಸೂಚಿಸಿವೆ.
ಈ ಹಿಂದೆ ಎರಡು ಬಾರಿ ಇಂತಹ ಅವಕಾಶ ಕೈತಪ್ಪಿ ಹೋಗಿದೆ ಎಂದು ಅವರು ಹೇಳಿಕೆ ನೀಡಿದ್ದು, ಇದಕ್ಕೆ ಆಡಳಿತಾರೂಢ ಡಿಎಂಕೆಯನ್ನು ದೂಷಿಸಿದ್ದಾರೆ ಎನ್ನಲಾಗಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮತ್ತು ಈ ಉದ್ದೇಶಕ್ಕಾಗಿ ಬೂತ್ ಸಮಿತಿ ಬಲಪಡಿಸಲು ಬಿಜೆಪಿ ಪದಾಧಿಕಾರಿಗಳಿಗೆ ಷಾ ಪ್ರೋತ್ಸಾಹಿಸಿದ್ದಾರೆ ಎಂದು ಮೂಲಗಳು ವಿವರಿಸಿವೆ.
Advertisement