ಕೇಂದ್ರದ ಸುಗ್ರೀವಾಜ್ಞೆ: ಕಾಂಗ್ರೆಸ್ ಬೆಂಬಲದ ಭರವಸೆ ನೀಡದಿದ್ದಲ್ಲಿ ವಿಪಕ್ಷಗಳ ಸಭೆಯಿಂದ ಎಎಪಿ ಹೊರಕ್ಕೆ- ಮೂಲಗಳು

ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದಲ್ಲಿ ಶುಕ್ರವಾರ ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷ ನಾಯಕರ ಸಭೆಯಿಂದ ಎಎಪಿ ಹೊರನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎಎಪಿ ಸಾಂದರ್ಭಿಕ ಚಿತ್ರ
ಎಎಪಿ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದಲ್ಲಿ ಶುಕ್ರವಾರ ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷ ನಾಯಕರ ಸಭೆಯಿಂದ ಎಎಪಿ ಹೊರನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದಲ್ಲಿ ಎಎಪಿ ಸಭೆಯಿಂದ ಹೊರನಡೆಯಲಿದೆ ಎಂದು ಮೂಲವೊಂದು ಗುರುವಾರ ತಿಳಿಸಿದೆ.

ಮಂಗಳವಾರ ಪಾಟ್ನಾದಲ್ಲಿ ನಡೆದ ಬಿಜೆಪಿಯೇತರ ಪಕ್ಷಗಳ ಸಭೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭರವಸೆ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com